ಖಡ್ಗ ಸಂಸ್ಥೆಯ ನಿರ್ದೇಶಕ ಚಂದ್ರಹಾಸ ಲಿಂಗದಹಳ್ಳಿ ಮಾತನಾಡಿ, ‘ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಚನ್ನಗಿರಿ ತಾಲೂಕಿನ 120, ಹೊನ್ನಾಳಿ ತಾಲೂಕಿನ 4, ಹೊಳಲ್ಕೆರೆಯ 4, ಶಿವಮೊಗ್ಗ ಜಿಲ್ಲೆಯ 12 ಕೆರೆಗಳಿಗೆ ನೀರು ತುಂಬಿಸಲಾಗುವುದು. ಯೋಜನೆ ಪೂರ್ಣಗೊಂಡಲ್ಲಿ ಸಾಕಷ್ಟು ಅನುಕೂಲ ಆಗಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವ ಜೊತೆಗೆ ಅಂತರ್ಜಲ ಮಟ್ಟ ಹೆಚ್ಚುವ ಮೂಲಕ ರೈತರಿಗೆ ಪ್ರಯೋಜನವಾಗಲಿದೆ. ಆದರೆ, ಯೋಜನೆ ಜನಪ್ರತಿನಿಗಳ ಇಚ್ಛಾಶಕ್ತಿ ಕೊರತೆಯಿಂದ ಯೋಜನೆ ಈವರೆಗೆ ಮುಗಿದಿಲ್ಲ’ ಎಂದು ಆರೋಪಿಸಿದರು.