ಸಂತೇಬೆನ್ನೂರು ಸಮೀಪದ ದೊಡ್ಡಬ್ಬಿಗೆರೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ನಾಲ್ಕು ಕಂಬಗಳು ಮುರಿದು ಬಿದ್ದಿವೆ. ಗ್ರಾಮಸ್ಥರು ಬೆಸ್ಕಾಂ ಕಚೇರಿಗೆ ಕರೆ ಮಾಡಿ ವಿದ್ಯುತ್ ನಿಲುಗಡೆ ಮಾಡಿಸಿದ್ದರಿಂದ ಅವಘಡ ತಪ್ಪಿದೆ.
ಸಂತೇಬೆನ್ನೂರಿನಿಂದ ಸಾಸಲು ರಸ್ತೆಯಲ್ಲಿ ಚರಂಡಿ ಕಾಮಗಾರಿ ಅಪೂರ್ಣವಾಗಿದ್ದರಿಂದ ರಸ್ತೆಗೆ ನೀರು ನುಗ್ಗಿದೆ.