ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ತಂತಿ ತುಳಿದು ರೈತ ಸಾವು

Last Updated 5 ಜೂನ್ 2020, 14:11 IST
ಅಕ್ಷರ ಗಾತ್ರ

ದಾವಣಗೆರೆ: ಜಮೀನಿನಲ್ಲಿ ವಿದ್ಯುತ್ ತಂತಿ ತುಳಿದು ತಾಲ್ಲೂಕಿನ ಆಲೂರು ಗ್ರಾಮದ ರೈತ ಶಿವರಾಜ್ (50) ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಶಿವರಾಜ್ ಅವರು ಎಂದಿನಂತೆ ಜಮೀನಿಗೆ ತೆರಳಿದ್ದ ವೇಳೆ ಹಸಿ ಹುಲ್ಲಿನೊಳಗೆ ವಿದ್ಯುತ್ ತಂತಿ ಬಿದ್ದಿತ್ತು. ಇದನ್ನು ಗಮನಿಸದ ಅವರು ತುಳಿದಿದ್ದು, ವಿದ್ಯುತ್ ಶಾಕ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪಿಎಸ್ಐ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸಿತು. ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ಬಸವಂತಪ್ಪ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT