ಕೇಶವ ನಗರದ 2ನೇ ಮೇನ್ 3ನೇ ಕ್ರಾಸ್ನಲ್ಲಿ 3-4 ದಿನಗಳಿಂದ ಬೆಸ್ಕಾಂ ಇಲಾಖೆಯಿದ ವಿದ್ಯುತ್ ಕಂಬಗಳ ಬದಲಾವಣೆ ಕಾಮಗಾರಿ ನಡೆಯುತ್ತಿತ್ತು. ಈ ಕಾಮಗಾರಿಯನ್ನು ಗದಗಿನ ಅಮಾನ್ ಸಂಸ್ಥೆ ನಿರ್ವಹಿಸುತ್ತಿತ್ತು. ನಿತ್ಯದಂತೆ ಕಾಮಗಾರಿ ನಿರ್ವಹಿಸುತ್ತಿದ್ದಾಗ ಭಾನುವಾರ ಮಧ್ಯಾಹ್ನ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದೆ. ಕಾಮಗಾರಿ ಮಾಡುವ ಸಂದರ್ಭ ಅಗತ್ಯ ಸುರಕ್ಷತಾ ಪರಿಕರಗಳನ್ನು ಬಳಸದ ಕಾರಣ ಕಂಬದ ಮೇಲಿದ್ದ ಇಬ್ಬರು ಕಾರ್ಮಿಕರಿಗೆ ವಿದ್ಯುತ್ ಶಾಕ್ ತಗುಲಿ ಆಘಾತಕ್ಕೀಡಾಗಿದ್ದಾರೆ.