<p><strong>ದಾವಣಗೆರೆ</strong>: ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಕೈಬಿಡುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಹದಡಿ ರಸ್ತೆಯ ‘ಬೆಸ್ಕಾಂ’ ಗ್ರಾಮಾಂತರ ವಿಭಾಗದ ಕಚೇರಿಯ ಎದುರು ಜಮಾಯಿಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಹುನ್ನಾರದಿಂದ ಈ ಮಸೂದೆ ರೂಪಿಸಲಾಗಿದೆ. ಇದು ಜಾರಿಗೆ ಬಂದರೆ ಸಾರ್ವಜನಿಕರಿಗೆ ದೊರೆಯುವ ವಿದ್ಯುತ್ ಸೇವೆಗಳು ಖಾಸಗಿ ಕಂಪನಿಗಳ ಲಾಭದಾಯಕ ವ್ಯವಹಾರವಾಗಿ ಮಾರ್ಪಡುವ ಅಪಾಯವಿದೆ ಎಂದು ಆರೋಪಿಸಿದರು.</p>.<p>ಜಿಲ್ಲೆಯಲ್ಲಿ ಅಳವಡಿಸಿದ ಸ್ಮಾರ್ಟ್ ಮೀಟರ್ನಿಂದ ದೋಷಪೂರಿತ ಬಿಲ್ಗಳು ಹೆಚ್ಚಾಗಿವೆ. ಅನಿಯಂತ್ರಿತ ದರ ಏರಿಕೆ, ತಾಂತ್ರಿಕ ದೋಷಗಳು, ಅಸಮಂಜಸ ವಿದ್ಯುತ್ ಕಡಿತ ಕಂಡುಬಂದಿದೆ. ಗ್ರಾಮೀಣ ಪ್ರದೇಶದ ಮನೆ, ಕೃಷಿ ಪಂಪ್ಸೆಟ್ಗಳಿಗೆ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾರ್ಮಿಕ ಮುಖಂಡ ಆವರಗೆರೆ ಎಚ್.ಜಿ. ಉಮೇಶ್, ರೈತ ಮುಖಂಡ ಹೊನ್ನೂರು ಮುನಿಯಪ್ಪ, ಪಿ.ಪಿ. ಮರುಳಾರಾಧ್ಯ, ಇ. ಶ್ರೀನಿವಾಸ್, ಮಂಜುನಾಥ್ ಕುಕ್ಕವಾಡ, ಮಂಜುನಾಥ್ ಕೈದಾಳೆ, ಕೆ.ಬಾನಪ್ಪ, ಸತೀಶ್ ಅರವಿಂದ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಕೈಬಿಡುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಹದಡಿ ರಸ್ತೆಯ ‘ಬೆಸ್ಕಾಂ’ ಗ್ರಾಮಾಂತರ ವಿಭಾಗದ ಕಚೇರಿಯ ಎದುರು ಜಮಾಯಿಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಹುನ್ನಾರದಿಂದ ಈ ಮಸೂದೆ ರೂಪಿಸಲಾಗಿದೆ. ಇದು ಜಾರಿಗೆ ಬಂದರೆ ಸಾರ್ವಜನಿಕರಿಗೆ ದೊರೆಯುವ ವಿದ್ಯುತ್ ಸೇವೆಗಳು ಖಾಸಗಿ ಕಂಪನಿಗಳ ಲಾಭದಾಯಕ ವ್ಯವಹಾರವಾಗಿ ಮಾರ್ಪಡುವ ಅಪಾಯವಿದೆ ಎಂದು ಆರೋಪಿಸಿದರು.</p>.<p>ಜಿಲ್ಲೆಯಲ್ಲಿ ಅಳವಡಿಸಿದ ಸ್ಮಾರ್ಟ್ ಮೀಟರ್ನಿಂದ ದೋಷಪೂರಿತ ಬಿಲ್ಗಳು ಹೆಚ್ಚಾಗಿವೆ. ಅನಿಯಂತ್ರಿತ ದರ ಏರಿಕೆ, ತಾಂತ್ರಿಕ ದೋಷಗಳು, ಅಸಮಂಜಸ ವಿದ್ಯುತ್ ಕಡಿತ ಕಂಡುಬಂದಿದೆ. ಗ್ರಾಮೀಣ ಪ್ರದೇಶದ ಮನೆ, ಕೃಷಿ ಪಂಪ್ಸೆಟ್ಗಳಿಗೆ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾರ್ಮಿಕ ಮುಖಂಡ ಆವರಗೆರೆ ಎಚ್.ಜಿ. ಉಮೇಶ್, ರೈತ ಮುಖಂಡ ಹೊನ್ನೂರು ಮುನಿಯಪ್ಪ, ಪಿ.ಪಿ. ಮರುಳಾರಾಧ್ಯ, ಇ. ಶ್ರೀನಿವಾಸ್, ಮಂಜುನಾಥ್ ಕುಕ್ಕವಾಡ, ಮಂಜುನಾಥ್ ಕೈದಾಳೆ, ಕೆ.ಬಾನಪ್ಪ, ಸತೀಶ್ ಅರವಿಂದ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>