ಉಬ್ರಾಣಿ ಭಾಗದಲ್ಲಿ ಪದೇಪದೆ ಕೃಷಿ ಭೂಮಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಆನೆಗಳ ಉಪಟಳದಿಂದ ರೈತರು ಬೇಸತ್ತಿದ್ದರು. ಅರಣ್ಯದಂಚಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಕೃಷಿ ಭೂಮಿಗಳಿಗೆ ತೆರಳಲೂ ರೈತರು ಹೆದರುತ್ತಿದ್ದರು. ಹೀಗಾಗಿ, ಬೆಳೆನಾಶ ಮಾಡುತ್ತಿದ್ದ ಕಾಡಾನೆಯನ್ನು ಬಂಧಿಸಲು ಸರ್ಕಾರ ಅನುಮತಿ ನೀಡಿತ್ತು. ಇದೀಗ ಒಂದು ಆನೆ ಸೆರೆಯಾಗಿದ್ದು, ಕುಕ್ಕವಾಡೇಶ್ವರಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ಇನ್ನೂ 7 ಆನೆಗಳು ಇವೆ.