<p><strong>ದಾವಣಗೆರೆ: </strong>ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರು ಗ್ರಾಮದಲ್ಲಿ ಗುರುವಾರ ವಾಯುವಿಹಾರಕ್ಕೆ ತೆರಳಿದ್ದ ದಂಪತಿ ಮರಿಯಾನೆ ತಿವಿದ ಪರಿಣಾಮ ಗಾಯಗೊಂಡಿದ್ದಾರೆ.</p>.<p>ಹಿರೇಕೋಗಲೂರು ಗ್ರಾಮದ ಶೈಲೇಂದ್ರ ಹಾಗೂ ಆಶಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎದೆಯ ಭಾಗದಲ್ಲಿ ನೋವು ಕಾಣಿಸಿಕೊಂಡಿರುವುದರಿಂದ ಶೈಲೇಂದ್ರ ಅವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಗುಂಪಿನಿಂದ ತಪ್ಪಿಸಿಕೊಂಡಿರುವ ಮರಿಯಾನೆ ಬುಧವಾರ ಹೊನ್ನಾಳಿ ತಾಲ್ಲೂಕಿನ ಹೊಸಹಳ್ಳಿ ಬಳಿ ತುಂಗಭದ್ರಾ ನದಿ ತೀರದಲ್ಲಿ ಕಾಣಿಸಿಕೊಂಡಿತ್ತು. ಶಿಕಾರಿಪುರ ಮಾರ್ಗವಾಗಿ ಬಂದಿರುವ ಐದಾರು ವರ್ಷದ ಈ ಮರಿಯಾನೆ, ಜೀನಹಳ್ಳಿ, ಕೆಂಚಿಕೊಪ್ಪ ಸುತ್ತಲಿನ ಭಾಗಗಳ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿತ್ತು.</p>.<p>ಡೇಲಿಯ ವನ್ಯಜೀವಿ ಧಾಮದಿಂದ ಈ ಮರಿಯಾನೆ ತಪ್ಪಿಸಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.</p>.<p>ಆನೆಯನ್ನು ಬಂದ ದಾರಿಯಲ್ಲೇ ವಾಪಸ್ ಕಳುಹಿಸಲು ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಅರಣ್ಯ ಇಲಾಖೆಯ ತಿಪ್ಪೇಸ್ವಾಮಿ ಎಂಬುವವರಿಗೆ ಆನೆ ತಿವಿದಿತ್ತು. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಸಂಜೆ ವೇಳೆಗೆ ಆನೆಯು ಹೊಸಹಳ್ಳಿಯಿಂದ ಹೊಮ್ಮನಹಳ್ಳಿ ಮೂಲಕ ಹನುಮನಹಳ್ಳಿ ಕಡೆಗೆ ತೆರಳಿತ್ತು.</p>.<p><strong>ಮುಂಜಾನೆ ಆಘಾತ:</strong> ಗುರುವಾರ ಬೆಳಿಗ್ಗೆ 5.30ಕ್ಕೆ ಶೈಲೇಂದ್ರ ಹಾಗೂ ಆಶಾ ದಂಪತಿ ಹಿರೇಕೋಗಲೂರಿನಲ್ಲಿ ವಾಯುವವಿಹಾರಕ್ಕೆ ತೆರಳಿದ್ದರು.</p>.<p>‘ಬೆಳಿಗ್ಗೆ 5.45ರ ಸುಮಾರಿಗೆ ವಾಪಸ್ ಬರುತ್ತಿದ್ದಾಗ ತೋಟದಲ್ಲಿ ಶಬ್ದ ಕೇಳಿಸಿಕೊಂಡಿತು. ಸಮೀಪಕ್ಕೆ ಹೋಗಿ ನೋಡಿದಾಗ ಏಕಾಏಕಿ ಮರಿಯಾನೆ ಎದುರಿಗೆ ಬಂತು. ಗಾಬರಿಯಿಂದ ನಾವು ಓಡಿ ಹೋಗುತ್ತಿದ್ದೆವು. ಈ ವೇಳೆ ಆಶಾ ಜಾರಿ ಬಿದ್ದಳು. ನಮ್ಮನ್ನು ಹಿಂಬಾಲಿಸಿಕೊಂಡು ಬಂದ ಆನೆ ಇಬ್ಬರಿಗೂ ತಿವಿದು ಗಿರಿಯಾಪುರ ಕಡೆಗೆ ಹೋಯಿತು’ ಎಂದು ಶೈಲೇಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಗುಂಪಿನಿಂದ ತಪ್ಪಿಸಿಕೊಂಡು ಬಂದಿರುವ ಮರಿಯಾನೆ ದಾಂಧಲೆ ನಡೆಸುತ್ತಿದ್ದು, ಗ್ರಾಮಸ್ಥರು ಭಯಗೊಂಡಿದ್ದಾರೆ. ಮರಿಯಾನೆಯನ್ನು ಹಿಡಿದು ಸಾಗಿಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರು ಗ್ರಾಮದಲ್ಲಿ ಗುರುವಾರ ವಾಯುವಿಹಾರಕ್ಕೆ ತೆರಳಿದ್ದ ದಂಪತಿ ಮರಿಯಾನೆ ತಿವಿದ ಪರಿಣಾಮ ಗಾಯಗೊಂಡಿದ್ದಾರೆ.</p>.<p>ಹಿರೇಕೋಗಲೂರು ಗ್ರಾಮದ ಶೈಲೇಂದ್ರ ಹಾಗೂ ಆಶಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎದೆಯ ಭಾಗದಲ್ಲಿ ನೋವು ಕಾಣಿಸಿಕೊಂಡಿರುವುದರಿಂದ ಶೈಲೇಂದ್ರ ಅವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಗುಂಪಿನಿಂದ ತಪ್ಪಿಸಿಕೊಂಡಿರುವ ಮರಿಯಾನೆ ಬುಧವಾರ ಹೊನ್ನಾಳಿ ತಾಲ್ಲೂಕಿನ ಹೊಸಹಳ್ಳಿ ಬಳಿ ತುಂಗಭದ್ರಾ ನದಿ ತೀರದಲ್ಲಿ ಕಾಣಿಸಿಕೊಂಡಿತ್ತು. ಶಿಕಾರಿಪುರ ಮಾರ್ಗವಾಗಿ ಬಂದಿರುವ ಐದಾರು ವರ್ಷದ ಈ ಮರಿಯಾನೆ, ಜೀನಹಳ್ಳಿ, ಕೆಂಚಿಕೊಪ್ಪ ಸುತ್ತಲಿನ ಭಾಗಗಳ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿತ್ತು.</p>.<p>ಡೇಲಿಯ ವನ್ಯಜೀವಿ ಧಾಮದಿಂದ ಈ ಮರಿಯಾನೆ ತಪ್ಪಿಸಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.</p>.<p>ಆನೆಯನ್ನು ಬಂದ ದಾರಿಯಲ್ಲೇ ವಾಪಸ್ ಕಳುಹಿಸಲು ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಅರಣ್ಯ ಇಲಾಖೆಯ ತಿಪ್ಪೇಸ್ವಾಮಿ ಎಂಬುವವರಿಗೆ ಆನೆ ತಿವಿದಿತ್ತು. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಸಂಜೆ ವೇಳೆಗೆ ಆನೆಯು ಹೊಸಹಳ್ಳಿಯಿಂದ ಹೊಮ್ಮನಹಳ್ಳಿ ಮೂಲಕ ಹನುಮನಹಳ್ಳಿ ಕಡೆಗೆ ತೆರಳಿತ್ತು.</p>.<p><strong>ಮುಂಜಾನೆ ಆಘಾತ:</strong> ಗುರುವಾರ ಬೆಳಿಗ್ಗೆ 5.30ಕ್ಕೆ ಶೈಲೇಂದ್ರ ಹಾಗೂ ಆಶಾ ದಂಪತಿ ಹಿರೇಕೋಗಲೂರಿನಲ್ಲಿ ವಾಯುವವಿಹಾರಕ್ಕೆ ತೆರಳಿದ್ದರು.</p>.<p>‘ಬೆಳಿಗ್ಗೆ 5.45ರ ಸುಮಾರಿಗೆ ವಾಪಸ್ ಬರುತ್ತಿದ್ದಾಗ ತೋಟದಲ್ಲಿ ಶಬ್ದ ಕೇಳಿಸಿಕೊಂಡಿತು. ಸಮೀಪಕ್ಕೆ ಹೋಗಿ ನೋಡಿದಾಗ ಏಕಾಏಕಿ ಮರಿಯಾನೆ ಎದುರಿಗೆ ಬಂತು. ಗಾಬರಿಯಿಂದ ನಾವು ಓಡಿ ಹೋಗುತ್ತಿದ್ದೆವು. ಈ ವೇಳೆ ಆಶಾ ಜಾರಿ ಬಿದ್ದಳು. ನಮ್ಮನ್ನು ಹಿಂಬಾಲಿಸಿಕೊಂಡು ಬಂದ ಆನೆ ಇಬ್ಬರಿಗೂ ತಿವಿದು ಗಿರಿಯಾಪುರ ಕಡೆಗೆ ಹೋಯಿತು’ ಎಂದು ಶೈಲೇಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಗುಂಪಿನಿಂದ ತಪ್ಪಿಸಿಕೊಂಡು ಬಂದಿರುವ ಮರಿಯಾನೆ ದಾಂಧಲೆ ನಡೆಸುತ್ತಿದ್ದು, ಗ್ರಾಮಸ್ಥರು ಭಯಗೊಂಡಿದ್ದಾರೆ. ಮರಿಯಾನೆಯನ್ನು ಹಿಡಿದು ಸಾಗಿಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>