‘ಬಂಡಿಗುಡ್ಡ ಪ್ರದೇಶದಲ್ಲಿ ಕಾಡಾನೆ ತೋಟಕ್ಕೆ ನುಗ್ಗಿ ಹಾನಿ ಮಾಡಿರುವ ಮಾಹಿತಿ ಸಿಕ್ಕಿದೆ. ತಾಲ್ಲೂಕು ಆನೆ ಕಾರಿಡಾರ್ ವ್ಯಾಪ್ತಿಗೆ ಒಳಪಡುವ ಕಾರಣ ಈ ಭಾಗದಲ್ಲಿ ಕಾಡಾನೆಗಳು ತೋಟಗಳಿಗೆ ನುಗ್ಗುವುದು ಸಾಮಾನ್ಯ. ರೈತರು ಆತಂಕ ಪಡುವ ಅಗತ್ಯ ಇಲ್ಲ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ವಲಯ ಅರಣ್ಯಾಧಿಕಾರಿ ಮಧುಸೂದನ್ ತಿಳಿಸಿದ್ದಾರೆ.