ಆನೆ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಡ್ರೋಣ್ ತಂಡ, ಮಾವುತರು, ಪಶು ವೈದ್ಯಾಧಿಕಾರಿಗಳ ತಂಡದೊಡನೆ ಕಾರ್ಯಾಚರಣೆ ಆರಂಭಿಸಿದ್ದರು. ಸೋಮವಾರ ಬಸವಾಪಟ್ಟಣದ ಶೃಂಗಾರ ಭಾಗ್ ಬಳಿ ಇರುವ ಸಂಶಯ ವ್ಯಕ್ತವಾಗಿತ್ತು. ಆದರೆ ಮಂಗಳವಾರ ನ್ಯಾಮತಿಯ ಕೆಂಚಿಕೊಪ್ಪ ಸಮೀಪದ ಹನುಮಾಪುರ ಗಡಿ ಭಾಗ ಜಾಲಿ ಹೊಸೂರು ಹತ್ತಿರ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದ್ದಾರೆ.