‘ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಈ ದೇಶದ ಸಂಪತ್ತು, ಭೂಮಿ, ಅವಕಾಶಗಳು, ಸವಲತ್ತುಗಳು ಸಮಾನವಾಗಿ ಹಂಚಿಕೆ ಆಗದಿರುವುದು ದುರಂತದ ಸಂಗತಿ. ಸಂವಿಧಾನದ ಆಶಯಗಳು ಈಡೇರಬೇಕಾದರೆ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಸಮಾನತೆ ಸಾಧಿಸಬೇಕು. ಜನರು ಇಂದಿಗೂ ಜಾತಿ, ವರ್ಗ, ಧರ್ಮ, ಲಿಂಗದ ಆಧಾರದ ಮೇಲೆ ಸಾಮಾಜಿಕ ನ್ಯಾಯದಿಂದ ವಂಚಿತರಾಗಿದ್ದಾರೆ. ಇದಕ್ಕಾಗಿ ಅನೇಕ ಹೋರಾಟ, ಚಳವಳಿ ನಡೆದಿರುವುದನ್ನು ಯುವಜನತೆ ಅರ್ಥೈಸಿಕೊಳ್ಳಬೇಕು’ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್ ಹೇಳಿದರು.