ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬರ ಪರಿಹಾರ ನಿಧಿಗೆ ನೌಕರರ ನೆರವು: ಸಿ.ಎಸ್.ಷಡಾ‌ಕ್ಷರಿ

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾ‌ಕ್ಷರಿ
Published 11 ಜನವರಿ 2024, 21:22 IST
Last Updated 11 ಜನವರಿ 2024, 21:22 IST
ಅಕ್ಷರ ಗಾತ್ರ

ದಾವಣಗೆರೆ: ಸರ್ಕಾರ ಬಯಸಿದರೆ ರಾಜ್ಯ ಸರ್ಕಾರಿ ನೌಕರರ ಸಂಬಳದಿಂದ ಬರ ಪರಿಹಾರ ನಿಧಿಗೆ ನೆರವು ನೀಡುವುದಾಗಿ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಾ‌ಕ್ಷರಿ ಹೇಳಿದರು.

ಪುಣ್ಯಕೋಟಿ ಯೋಜನೆಗೆ ₹50 ಕೋಟಿ, ಪ್ರವಾಹದ ಸಂದರ್ಭದಲ್ಲಿ ₹200 ಕೋಟಿ ಹಾಗೂ ಕೋವಿಡ್‌ ಸಂದರ್ಭ ಸೇರಿದಂತೆ ನಾನು ಅಧ್ಯಕ್ಷನಾಗಿರುವ ಅವಧಿಯಲ್ಲಿ ಒಟ್ಟು ₹1,000 ಕೋಟಿಯಷ್ಟು ನೆರವು ನೀಡಲಾಗಿದೆ. ಮುಖ್ಯಮಂತ್ರಿಯವರು ಈ ಸಂಬಂಧ ಚರ್ಚೆಗೆ ಆಹ್ವಾನಿಸಿದ್ದು, ಅವರ ಜೊತೆ ಚರ್ಚಿಸಿ ನೆರವು ಒದಗಿಸುವ ಬಗ್ಗೆ ತಿಳಿಸಲಾಗುವುದು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘7ನೇ ವೇತನ ಆಯೋಗದ ಶಿಫಾರಸು ಜಾರಿ, ಹಳೆ ಪಿಂಚಣಿ ವ್ಯವಸ್ಥೆ ಮರು ಸ್ಥಾಪನೆ, ಆರೋಗ್ಯ ಸಂಜೀವಿನಿ ಸೇರಿದಂತೆ ಇತರ ಬೇಡಿಕೆಗಳ  ಈಡೇರಿಕೆಗೆ ಮುಖ್ಯಮಂತ್ರಿಯವರ ಗಮನ ಸೆಳೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಲಾಗುತ್ತಿದೆ. ಮುಂಬರುವ ಬಜೆಟ್ ಒಳಗಾಗಿ ಸರ್ಕಾರ ನಮ್ಮ ಬೇಡಿಕೆಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT