<p><strong>ಹೊನ್ನಾಳಿ:</strong> ಪೌರ ನೌಕರರ ಪ್ರಮುಖವಾದ 7 ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದ್ದರಿಂದ ಮುಷ್ಕರವನ್ನು ಕೈಬಿಡುತ್ತಿರುವುದಾಗಿ ಪೌರ ಕಾರ್ಮಿಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಕೆ. ನಾಗರಾಜಪ್ಪ ಹೇಳಿದರು.</p>.<p>ಶನಿವಾರ ಪುರಸಭೆ ಆವರಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ, ಸಂಘದ ರಾಜ್ಯ ಘಟಕದ ಅಧ್ಯಕ್ಷರ ಸೂಚನೆ ಮೇರೆಗೆ ಮುಷ್ಕರ ಕೈಬಿಟ್ಟಿದ್ದೇವೆ ಎಂದರು.</p>.<p>ಐದು ದಿನಗಳಿಂದ ಸ್ಥಗಿತಗೊಳಿಸಿದ್ದ ಕಚೇರಿ ಕೆಲಸ, ಕಸ ಸಂಗ್ರಹಣೆ, ವಿಲೇವಾರಿ, ಸ್ವಚ್ಛತೆ ನಿರ್ವಹಣೆ ಕಾರ್ಯಗಳಿಗೆ ಇಂದಿನಿಂದಲೇ ಚಾಲನೆ ನೀಡಲಿದ್ದೇವೆ ಎಂದರು. ಉಪಾಧ್ಯಕ್ಷ ಓಬಳೇಶ್, ಪ್ರಜಾಪರಿವರ್ತನಾ ವೇದಿಕೆಯ ಸಂಚಾಲಕ ಎ.ಡಿ. ಈಶ್ವರಪ್ಪ, ಬಿಜೆಪಿ ಮುಖಂಡ ಎಂ.ಆರ್. ಮಹೇಶ್ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಪೌರ ನೌಕರರ ಪ್ರಮುಖವಾದ 7 ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದ್ದರಿಂದ ಮುಷ್ಕರವನ್ನು ಕೈಬಿಡುತ್ತಿರುವುದಾಗಿ ಪೌರ ಕಾರ್ಮಿಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಕೆ. ನಾಗರಾಜಪ್ಪ ಹೇಳಿದರು.</p>.<p>ಶನಿವಾರ ಪುರಸಭೆ ಆವರಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ, ಸಂಘದ ರಾಜ್ಯ ಘಟಕದ ಅಧ್ಯಕ್ಷರ ಸೂಚನೆ ಮೇರೆಗೆ ಮುಷ್ಕರ ಕೈಬಿಟ್ಟಿದ್ದೇವೆ ಎಂದರು.</p>.<p>ಐದು ದಿನಗಳಿಂದ ಸ್ಥಗಿತಗೊಳಿಸಿದ್ದ ಕಚೇರಿ ಕೆಲಸ, ಕಸ ಸಂಗ್ರಹಣೆ, ವಿಲೇವಾರಿ, ಸ್ವಚ್ಛತೆ ನಿರ್ವಹಣೆ ಕಾರ್ಯಗಳಿಗೆ ಇಂದಿನಿಂದಲೇ ಚಾಲನೆ ನೀಡಲಿದ್ದೇವೆ ಎಂದರು. ಉಪಾಧ್ಯಕ್ಷ ಓಬಳೇಶ್, ಪ್ರಜಾಪರಿವರ್ತನಾ ವೇದಿಕೆಯ ಸಂಚಾಲಕ ಎ.ಡಿ. ಈಶ್ವರಪ್ಪ, ಬಿಜೆಪಿ ಮುಖಂಡ ಎಂ.ಆರ್. ಮಹೇಶ್ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>