<p>ದಾವಣಗೆರೆ: ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ದೂರುಗಳಿವೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಾಯು ಗುಣಮಟ್ಟವನ್ನು ನಿತ್ಯ ಪರಿಶೀಲಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.</p>.<p>ಇಲ್ಲಿನ ಅರಣ್ಯ ಭವನದಲ್ಲಿ ಗುರುವಾರ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಹೆಚ್ಚು ಮಾಲಿನ್ಯ ಇರುವ ಪ್ರದೇಶಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>‘ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿ ಬೆಲೆ ಬಾಳುವ ಶ್ರೀಗಂಧದ ಮರಗಳಿಗೆ ಜಿಯೊಟ್ಯಾಗ್ ಮಾಡಬೇಕು. ಒಂದೇ ಒಂದು ಮರವೂ ಅಕ್ರಮ ಕಡಿತಲೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ತಾಕೀತು ಮಾಡಿದರು.</p>.<p>‘ಹವಾಮಾನ ಬದಲಾವಣೆಗೆ ಹಸಿರು ಹೊದಿಕೆಯ ಹೆಚ್ಚಳವೇ ಪರಿಹಾರವಾಗಿದೆ. ಮುಂಬರುವ ವನಮಹೋತ್ಸವದ ಸಂದರ್ಭದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಎತ್ತರದ ಸಸಿಗಳನ್ನು ನೆಟ್ಟು ಪೋಷಿಸಬೇಕು. ಕಂದಾಯ ಭೂಮಿಯನ್ನು ಅರಣ್ಯ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಪರಿಸರ ಇಲಾಖೆಯ ವಾಯುಮಾಲಿನ್ಯ ನಿಗಾ ಮತ್ತು ಪರೀಕ್ಷಾ ಪ್ರಯೋಗಾಲಯ, ತ್ಯಾಜ್ಯ ಜಲ ಸಂಸ್ಕರಣಾ ಘಟಕ ಹಾಗೂ ನರ್ಸರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ದೂರುಗಳಿವೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಾಯು ಗುಣಮಟ್ಟವನ್ನು ನಿತ್ಯ ಪರಿಶೀಲಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.</p>.<p>ಇಲ್ಲಿನ ಅರಣ್ಯ ಭವನದಲ್ಲಿ ಗುರುವಾರ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಹೆಚ್ಚು ಮಾಲಿನ್ಯ ಇರುವ ಪ್ರದೇಶಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>‘ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿ ಬೆಲೆ ಬಾಳುವ ಶ್ರೀಗಂಧದ ಮರಗಳಿಗೆ ಜಿಯೊಟ್ಯಾಗ್ ಮಾಡಬೇಕು. ಒಂದೇ ಒಂದು ಮರವೂ ಅಕ್ರಮ ಕಡಿತಲೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ತಾಕೀತು ಮಾಡಿದರು.</p>.<p>‘ಹವಾಮಾನ ಬದಲಾವಣೆಗೆ ಹಸಿರು ಹೊದಿಕೆಯ ಹೆಚ್ಚಳವೇ ಪರಿಹಾರವಾಗಿದೆ. ಮುಂಬರುವ ವನಮಹೋತ್ಸವದ ಸಂದರ್ಭದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಎತ್ತರದ ಸಸಿಗಳನ್ನು ನೆಟ್ಟು ಪೋಷಿಸಬೇಕು. ಕಂದಾಯ ಭೂಮಿಯನ್ನು ಅರಣ್ಯ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಪರಿಸರ ಇಲಾಖೆಯ ವಾಯುಮಾಲಿನ್ಯ ನಿಗಾ ಮತ್ತು ಪರೀಕ್ಷಾ ಪ್ರಯೋಗಾಲಯ, ತ್ಯಾಜ್ಯ ಜಲ ಸಂಸ್ಕರಣಾ ಘಟಕ ಹಾಗೂ ನರ್ಸರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>