<p><strong>ದಾವಣಗೆರೆ</strong>: ಹೃದಯಾಘಾತಕ್ಕೆ ವಿವಿಧ ಕಾರಣಗಳಿವೆ. ಆದರೆ ವ್ಯಾಯಾಮವನ್ನು ತಳುಕು ಹಾಕಲಾಗುತ್ತಿದೆ. ನಿಯಮಿತ ವ್ಯಾಯಾಮದಿಂದ ಯಾವುದೇ ಅಪಾಯವಿಲ್ಲ. ಬದಲಾಗಿ ಅಧಿಕ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ನಂಥ ಕಾಯಿಲೆಗಳನ್ನು ದೂರವಿಡಬಹುದು ಎಂದು ತಜ್ಞ ವೈದ್ಯ ಡಾ.ಮನೋಜ್ ಪೂಜಾರ್ ಹೇಳಿದರು.</p>.<p>ದಾವಣಗೆರೆಯ ಪಿ.ಜೆ.ಬಡಾವಣೆಯ ಸ್ವೇಟ್ ಪಾರ್ಕ್ ಫಿಟ್ನೆಸ್ನಿಂದ ಜಿಮ್ ವಿದ್ಯಾರ್ಥಿಗಳಿಗೆ ಬುಧವಾರ ಹಮ್ಮಿಕೊಂಡಿದ್ದ ‘ಹೃದಯ ಸಮಸ್ಯೆ’ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾಹಿತಿ ನೀಡಿದರು.</p>.<p>ಸರ್ಕಾರ ಶೀಘ್ರದಲ್ಲೇ ಜಿಮ್ ಬಗ್ಗೆ ನೂತನ ಮಾರ್ಗಸೂಚಿ ನೀಡಲಿದೆ. ಅದಕ್ಕೂ ಮುನ್ನ 35 ವರ್ಷ ದಾಟಿದವರಿಗೆ ಅವಶ್ಯಕತೆ ತಕ್ಕಷ್ಟು ವ್ಯಾಯಾಮ ಮಾಡಲು ಸಲಹೆ ನೀಡಬೇಕು ಎಂದು ತಿಳಿಸಿದರು.</p>.<p>ಬಿಪಿ, ಷುಗರ್ ಇರುವವರು, ವಂಶಪಾರಂಪರ್ಯವಾಗಿ ಹೃದಯ ಸಂಬಂಧಿ ಕಾಯಿಲೆ ಇರುವವರು, ಕೊಲೆಸ್ಟ್ರಾಲ್ ಹೊಂದಿರುವವರು ಹೆಚ್ಚಿನ ಪ್ರಮಾಣದಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಾರೆ. ಈ ಬಗ್ಗೆ ಎಚ್ಚರದಿಂದ ಇರಬೇಕು. 30 ವರ್ಷ ದಾಟಿದವರು ವರ್ಷಕ್ಕೆ ಒಮ್ಮೆ ತಪಾಸಣೆ ನಡೆಸಬೇಕು ಎಂದರು.</p>.<p>ಆಧುನಿಕ ಯುಗದ ಒತ್ತಡದ ಜೀವನದಿಂದ ಹೃದಯ ಸಂಬಂಧಿ ಕಾಯಿಲೆ ಹೆಚ್ಚಾಗಿದೆ. ಒತ್ತಡ ಕಡಿಮೆ ಮಾಡಿಕೊಳ್ಳಬೇಕು. ಆಧುನಿಕ ಜೀವನದಿಂದ ಹೊರಗಿರಬೇಕು. ಧೂಮಪಾನ, ಮದ್ಯಪಾನ ಮಾಡುವವರಿಗೂ ಹೃದಯಾಘಾತ ಹೆಚ್ಚು. ಮಾನಸಿಕವಾಗಿ, ದೈಹಿಕವಾಗಿ ಬಳಲಿರುವವರು ವ್ಯಾಯಾಮ ಮಾಡದೆ ಕನಿಷ್ಠ ಏಳು- ಎಂಟು ಗಂಟೆಗಳ ಕಾಲ ನಿದ್ರೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಎ. ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ಪುನೀತ್ ರಾಜ್ಕುಮಾರ್ ನಿಧನರಾದ ನಂತರ ಬಹಳಷ್ಟು ಜನರಲ್ಲಿ ಜಿಮ್ ಮಾಡಿದರೆ ತೊಂದರೆ ಎಂಬ ಭಾವ ಬಂದಿದೆ. ಈ ಬಗ್ಗೆ ತಜ್ಞ ವೈದ್ಯರಿಂದಲೇ ಅಭಿಪ್ರಾಯ ಪಡೆಯಲು ಈ ಕಾರ್ಯಾಗಾರ ಏರ್ಪಡಿಸಲಾಯಿತು’ ಎಂದು ತಿಳಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಸ್ವೇಟ್ ಫಿಟ್ನೆಸ್ ಪಾರ್ಕ್ನ ರೂಪಿತ್ ನಾಗರಾಜ್, ಅರುಣ್ ಮಾಸ್ಟರ್, ವಿಷು ಮಾಸ್ಟರ್ ಹಾಗೂ ತರಬೇತುದಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಹೃದಯಾಘಾತಕ್ಕೆ ವಿವಿಧ ಕಾರಣಗಳಿವೆ. ಆದರೆ ವ್ಯಾಯಾಮವನ್ನು ತಳುಕು ಹಾಕಲಾಗುತ್ತಿದೆ. ನಿಯಮಿತ ವ್ಯಾಯಾಮದಿಂದ ಯಾವುದೇ ಅಪಾಯವಿಲ್ಲ. ಬದಲಾಗಿ ಅಧಿಕ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ನಂಥ ಕಾಯಿಲೆಗಳನ್ನು ದೂರವಿಡಬಹುದು ಎಂದು ತಜ್ಞ ವೈದ್ಯ ಡಾ.ಮನೋಜ್ ಪೂಜಾರ್ ಹೇಳಿದರು.</p>.<p>ದಾವಣಗೆರೆಯ ಪಿ.ಜೆ.ಬಡಾವಣೆಯ ಸ್ವೇಟ್ ಪಾರ್ಕ್ ಫಿಟ್ನೆಸ್ನಿಂದ ಜಿಮ್ ವಿದ್ಯಾರ್ಥಿಗಳಿಗೆ ಬುಧವಾರ ಹಮ್ಮಿಕೊಂಡಿದ್ದ ‘ಹೃದಯ ಸಮಸ್ಯೆ’ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾಹಿತಿ ನೀಡಿದರು.</p>.<p>ಸರ್ಕಾರ ಶೀಘ್ರದಲ್ಲೇ ಜಿಮ್ ಬಗ್ಗೆ ನೂತನ ಮಾರ್ಗಸೂಚಿ ನೀಡಲಿದೆ. ಅದಕ್ಕೂ ಮುನ್ನ 35 ವರ್ಷ ದಾಟಿದವರಿಗೆ ಅವಶ್ಯಕತೆ ತಕ್ಕಷ್ಟು ವ್ಯಾಯಾಮ ಮಾಡಲು ಸಲಹೆ ನೀಡಬೇಕು ಎಂದು ತಿಳಿಸಿದರು.</p>.<p>ಬಿಪಿ, ಷುಗರ್ ಇರುವವರು, ವಂಶಪಾರಂಪರ್ಯವಾಗಿ ಹೃದಯ ಸಂಬಂಧಿ ಕಾಯಿಲೆ ಇರುವವರು, ಕೊಲೆಸ್ಟ್ರಾಲ್ ಹೊಂದಿರುವವರು ಹೆಚ್ಚಿನ ಪ್ರಮಾಣದಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಾರೆ. ಈ ಬಗ್ಗೆ ಎಚ್ಚರದಿಂದ ಇರಬೇಕು. 30 ವರ್ಷ ದಾಟಿದವರು ವರ್ಷಕ್ಕೆ ಒಮ್ಮೆ ತಪಾಸಣೆ ನಡೆಸಬೇಕು ಎಂದರು.</p>.<p>ಆಧುನಿಕ ಯುಗದ ಒತ್ತಡದ ಜೀವನದಿಂದ ಹೃದಯ ಸಂಬಂಧಿ ಕಾಯಿಲೆ ಹೆಚ್ಚಾಗಿದೆ. ಒತ್ತಡ ಕಡಿಮೆ ಮಾಡಿಕೊಳ್ಳಬೇಕು. ಆಧುನಿಕ ಜೀವನದಿಂದ ಹೊರಗಿರಬೇಕು. ಧೂಮಪಾನ, ಮದ್ಯಪಾನ ಮಾಡುವವರಿಗೂ ಹೃದಯಾಘಾತ ಹೆಚ್ಚು. ಮಾನಸಿಕವಾಗಿ, ದೈಹಿಕವಾಗಿ ಬಳಲಿರುವವರು ವ್ಯಾಯಾಮ ಮಾಡದೆ ಕನಿಷ್ಠ ಏಳು- ಎಂಟು ಗಂಟೆಗಳ ಕಾಲ ನಿದ್ರೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಎ. ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ಪುನೀತ್ ರಾಜ್ಕುಮಾರ್ ನಿಧನರಾದ ನಂತರ ಬಹಳಷ್ಟು ಜನರಲ್ಲಿ ಜಿಮ್ ಮಾಡಿದರೆ ತೊಂದರೆ ಎಂಬ ಭಾವ ಬಂದಿದೆ. ಈ ಬಗ್ಗೆ ತಜ್ಞ ವೈದ್ಯರಿಂದಲೇ ಅಭಿಪ್ರಾಯ ಪಡೆಯಲು ಈ ಕಾರ್ಯಾಗಾರ ಏರ್ಪಡಿಸಲಾಯಿತು’ ಎಂದು ತಿಳಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಸ್ವೇಟ್ ಫಿಟ್ನೆಸ್ ಪಾರ್ಕ್ನ ರೂಪಿತ್ ನಾಗರಾಜ್, ಅರುಣ್ ಮಾಸ್ಟರ್, ವಿಷು ಮಾಸ್ಟರ್ ಹಾಗೂ ತರಬೇತುದಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>