<p><strong>ದಾವಣಗೆರೆ:</strong> ‘ಕಲಾವಿದರು ಹಾಗೂ ಗಣಿತ ಕ್ಷೇತ್ರದವರದ್ದು ಅಕ್ಕ – ತಂಗಿ ಮಕ್ಕಳ ಸಂಬಂಧ. ಗಣಿತಜ್ಞರು ಸಂಖ್ಯೆಗಳನ್ನು ಇರಿಸಿಕೊಂಡು ಕಲ್ಪನೆ ಕಂಡು, ಸೂತ್ರ ಕಂಡುಕೊಳ್ಳುತ್ತಾರೆ. ಕಲಾವಿದರೂ ಅನೇಕ ಬಗೆಗಳಿಂದ ಪ್ರೇರಣೆಗೊಂಡು ಕಲ್ಪನಾ ಲೋಕದಲ್ಲಿ ವಿಹರಿಸುತ್ತಾರೆ, ಅನನ್ಯವಾಗಿ ಅಭಿವ್ಯಕ್ತಿಸುತ್ತಾರೆ’ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಆಡಳಿತಾಂಗ ಕುಲಸಚಿವ (ಪ್ರಭಾರ) ಯು.ಎಸ್. ಮಹಾಬಲೇಶ್ವರ ಅಭಿಪ್ರಾಯಪಟ್ಟರು. </p>.<p>ನಗರದ ದೃಶ್ಯ ಕಲಾ ಮಹಾವಿದ್ಯಾಲಯದ ದೃಶ್ಯವಿಶ್ವ ಕಲಾ ಗ್ಯಾಲರಿಯಲ್ಲಿ ಆ್ಯನಿಮೇಶನ್ ಮತ್ತು ಮಲ್ಟಿಮೀಡಿಯಾ ವಿಭಾಗದಿಂದ ಸೋಮವಾರ ಹಮ್ಮಿಕೊಂಡಿದ್ದ ಆ್ಯನಿಮೇಶನ್ ಮತ್ತು ಮಲ್ಟಿಮೀಡಿಯಾ ಮಾಧ್ಯಮ ಕಲಾಕೃತಿಗಳ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈ ರೀತಿಯ ಪ್ರದರ್ಶನ ಪ್ರತಿಭಾ ವಿಕಾಸಕ್ಕೆ ಪೂರಕ. ಕಲಾವಿದರು ಹೊರನೋಟಕ್ಕೆ ವಿಭಿನ್ನವಾಗಿ ಕಂಡರೂ, ಅಂತರಂಗದಲ್ಲಿ ಹೃದಯ ಶ್ರೀಮಂತಿಕೆಯಿಂದ ಕೂಡಿರುತ್ತಾರೆ. ವಿದ್ಯಾರ್ಥಿಗಳ ಕಲಾ ಪ್ರದರ್ಶನಗಳಿಗೆ ವಿಶ್ವವಿದ್ಯಾಲಯದ ಸಹಕಾರ ಸದಾ ಇರುತ್ತದೆ’ ಎಂದರು. </p>.<p>‘ಚಿತ್ರಕಲೆ, ಶಿಲ್ಪ, ಸಾಹಿತ್ಯ, ಸಂಗೀತ, ಇವೆಲ್ಲವೂ ಪರಸ್ಪರ ಸಂಬಂಧ ಹೊಂದಿವೆ. ಸಾಹಿತ್ಯ ಕೃತಿ ಜನರ ಗಮನ ಸೆಳೆಯಲು ಅದರ ಮುಖಪುಟ ಆಕರ್ಷಕ ಆಗಿರುವುದು ಮುಖ್ಯವಾಗುತ್ತದೆ’ ಎಂದು ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ ಬಾ.ಮ. ಬಸವರಾಜಯ್ಯ ಅಭಿಪ್ರಾಯಪಟ್ಟರು.</p>.<p>‘ಇತ್ತೀಚಿನ ವರ್ಷಗಳಲ್ಲಿ ದೃಶ್ಯ ಕಲಾ ಮಹಾವಿದ್ಯಾಲಯ ಈ ರೀತಿ ಔಚಿತ್ಯ ಪೂರ್ಣ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಹೆಚ್ಚು ಪರಿಚಿತವಾಗುತ್ತಿರುವುದು ಸಂತಸದ ಸಂಗತಿ. ಕಾಲೇಜಿನ ಕ್ಯಾಂಪಸ್ನಲ್ಲಿ ನಿತ್ಯವೂ ಕಲಾ ಲೋಕದ ಅನಾವರಣಗೊಳ್ಳಲಿ’ ಎಂದರು.</p>.<p>ಪ್ರಾಚಾರ್ಯ ಜೈರಾಜ ಚಿಕ್ಕ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಹಾಯಕ ಪ್ರಾಧ್ಯಾಪಕ ಸತೀಶ ಕುಮಾರ್ ವಲ್ಲೇಪುರೆ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ನವ್ಯಾ, ಕೃತಿಕಾ, ಕೀರ್ತಿ ಪ್ರಾರ್ಥಿಸಿದರು. ಬೋಧನಾ ಸಹಾಯಕರಾದ ದತ್ತಾತ್ರೇಯ ಎನ್. ಭಟ್ಟ ನಿರೂಪಿಸಿ, ಹರೀಶ ಹೆಡ್ನವರ್ ವಂದಿಸಿದರು. </p>.<p>ಬೋಧನಾ ಸಹಾಯಕ ರಂಗನಾಥ ಕುಲಕರ್ಣಿ, ನಿವೃತ್ತ ಪ್ರಾಚಾರ್ಯ ರವೀಂದ್ರ ಕಮ್ಮಾರ, ನಿವೃತ್ತ ಸಂಯೋಜನಾಧಿಕಾರಿ ಹನುಮಂತ ಆಚಾರ್, ಕಲಾವಿದ ರವೀಂದ್ರ ಅರಳಗುಪ್ಪಿ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಕಲಾವಿದರು ಹಾಗೂ ಗಣಿತ ಕ್ಷೇತ್ರದವರದ್ದು ಅಕ್ಕ – ತಂಗಿ ಮಕ್ಕಳ ಸಂಬಂಧ. ಗಣಿತಜ್ಞರು ಸಂಖ್ಯೆಗಳನ್ನು ಇರಿಸಿಕೊಂಡು ಕಲ್ಪನೆ ಕಂಡು, ಸೂತ್ರ ಕಂಡುಕೊಳ್ಳುತ್ತಾರೆ. ಕಲಾವಿದರೂ ಅನೇಕ ಬಗೆಗಳಿಂದ ಪ್ರೇರಣೆಗೊಂಡು ಕಲ್ಪನಾ ಲೋಕದಲ್ಲಿ ವಿಹರಿಸುತ್ತಾರೆ, ಅನನ್ಯವಾಗಿ ಅಭಿವ್ಯಕ್ತಿಸುತ್ತಾರೆ’ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಆಡಳಿತಾಂಗ ಕುಲಸಚಿವ (ಪ್ರಭಾರ) ಯು.ಎಸ್. ಮಹಾಬಲೇಶ್ವರ ಅಭಿಪ್ರಾಯಪಟ್ಟರು. </p>.<p>ನಗರದ ದೃಶ್ಯ ಕಲಾ ಮಹಾವಿದ್ಯಾಲಯದ ದೃಶ್ಯವಿಶ್ವ ಕಲಾ ಗ್ಯಾಲರಿಯಲ್ಲಿ ಆ್ಯನಿಮೇಶನ್ ಮತ್ತು ಮಲ್ಟಿಮೀಡಿಯಾ ವಿಭಾಗದಿಂದ ಸೋಮವಾರ ಹಮ್ಮಿಕೊಂಡಿದ್ದ ಆ್ಯನಿಮೇಶನ್ ಮತ್ತು ಮಲ್ಟಿಮೀಡಿಯಾ ಮಾಧ್ಯಮ ಕಲಾಕೃತಿಗಳ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈ ರೀತಿಯ ಪ್ರದರ್ಶನ ಪ್ರತಿಭಾ ವಿಕಾಸಕ್ಕೆ ಪೂರಕ. ಕಲಾವಿದರು ಹೊರನೋಟಕ್ಕೆ ವಿಭಿನ್ನವಾಗಿ ಕಂಡರೂ, ಅಂತರಂಗದಲ್ಲಿ ಹೃದಯ ಶ್ರೀಮಂತಿಕೆಯಿಂದ ಕೂಡಿರುತ್ತಾರೆ. ವಿದ್ಯಾರ್ಥಿಗಳ ಕಲಾ ಪ್ರದರ್ಶನಗಳಿಗೆ ವಿಶ್ವವಿದ್ಯಾಲಯದ ಸಹಕಾರ ಸದಾ ಇರುತ್ತದೆ’ ಎಂದರು. </p>.<p>‘ಚಿತ್ರಕಲೆ, ಶಿಲ್ಪ, ಸಾಹಿತ್ಯ, ಸಂಗೀತ, ಇವೆಲ್ಲವೂ ಪರಸ್ಪರ ಸಂಬಂಧ ಹೊಂದಿವೆ. ಸಾಹಿತ್ಯ ಕೃತಿ ಜನರ ಗಮನ ಸೆಳೆಯಲು ಅದರ ಮುಖಪುಟ ಆಕರ್ಷಕ ಆಗಿರುವುದು ಮುಖ್ಯವಾಗುತ್ತದೆ’ ಎಂದು ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ ಬಾ.ಮ. ಬಸವರಾಜಯ್ಯ ಅಭಿಪ್ರಾಯಪಟ್ಟರು.</p>.<p>‘ಇತ್ತೀಚಿನ ವರ್ಷಗಳಲ್ಲಿ ದೃಶ್ಯ ಕಲಾ ಮಹಾವಿದ್ಯಾಲಯ ಈ ರೀತಿ ಔಚಿತ್ಯ ಪೂರ್ಣ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಹೆಚ್ಚು ಪರಿಚಿತವಾಗುತ್ತಿರುವುದು ಸಂತಸದ ಸಂಗತಿ. ಕಾಲೇಜಿನ ಕ್ಯಾಂಪಸ್ನಲ್ಲಿ ನಿತ್ಯವೂ ಕಲಾ ಲೋಕದ ಅನಾವರಣಗೊಳ್ಳಲಿ’ ಎಂದರು.</p>.<p>ಪ್ರಾಚಾರ್ಯ ಜೈರಾಜ ಚಿಕ್ಕ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಹಾಯಕ ಪ್ರಾಧ್ಯಾಪಕ ಸತೀಶ ಕುಮಾರ್ ವಲ್ಲೇಪುರೆ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ನವ್ಯಾ, ಕೃತಿಕಾ, ಕೀರ್ತಿ ಪ್ರಾರ್ಥಿಸಿದರು. ಬೋಧನಾ ಸಹಾಯಕರಾದ ದತ್ತಾತ್ರೇಯ ಎನ್. ಭಟ್ಟ ನಿರೂಪಿಸಿ, ಹರೀಶ ಹೆಡ್ನವರ್ ವಂದಿಸಿದರು. </p>.<p>ಬೋಧನಾ ಸಹಾಯಕ ರಂಗನಾಥ ಕುಲಕರ್ಣಿ, ನಿವೃತ್ತ ಪ್ರಾಚಾರ್ಯ ರವೀಂದ್ರ ಕಮ್ಮಾರ, ನಿವೃತ್ತ ಸಂಯೋಜನಾಧಿಕಾರಿ ಹನುಮಂತ ಆಚಾರ್, ಕಲಾವಿದ ರವೀಂದ್ರ ಅರಳಗುಪ್ಪಿ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>