<p><strong>ದಾವಣಗೆರೆ: </strong>ದೇವರು, ಧರ್ಮದ ಹೆಸರಲ್ಲಿ ಜನರನ್ನು ಶೋಷಣೆ ಮಾಡಲಾಗುತ್ತಿದೆ. ಟಿ.ವಿ.ಗಳಲ್ಲಿ ಬೆಳಿಗ್ಗೆ ಬರುವ ಗುರೂಜಿಗಳಿಂದಾಗಿ ಬದುಕಿನ ನೆಮ್ಮದಿಯೇ ಹಾಳಾಗಿದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.</p>.<p>ಜಯದೇವಶ್ರೀಗಳ 63ನೇ ಸ್ಮರಣೋತ್ಸವ ಪ್ರಯುಕ್ತ ದೊಡ್ಡಪೇಟೆ ವಿರಕ್ತಮಠದಲ್ಲಿ ಜನಜಾಗೃತಿ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.</p>.<p>ಸೂರ್ಯಗ್ರಹಣ ಹಿಡಿದ ಸಮಯದಲ್ಲಿ ಮೌಢ್ಯದಿಂದಾಗಿ ದೇಶವೇ ಬಂದ್ ಆಗಿತ್ತು. ಮೂಢನಂಬಿಕೆಗೆ ಬಲಿಯಾಗಬಾರದು. ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು. ಅಜ್ಞಾನವನ್ನು ಕಿತ್ತು ಹಾಕಿದಾಗ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ. ಕಂದಾಚಾರ, ಜಾತೀಯತೆ, ಬಡತನ, ಅನಕ್ಷರತೆ ಹೋಗಲಾಡಿಸಲು ಜನಜಾಗೃತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ವಿರಕ್ತಮಠದಿಂದ ಮದಕರಿನಾಯಕ ವೃತ್ತ, ಸ್ವಾಗೇರಪೇಟೆ, ಕಾಯಿಪೇಟೆ, ವಿಜಯಲಕ್ಷ್ಮಿ ರಸ್ತೆಯ ಮೂಲಕ ಜನಜಾಗೃತಿ ಪಾದಯಾತ್ರೆ ಸಾಗಿತು.</p>.<p>ಶಿರಗುಪ್ಪ ಬಸವಭೂಷಣ ಸ್ವಾಮೀಜಿ, ಎಚ್.ಕೆ. ರಾಮಚಂದ್ರಪ್ಪ, ಕಣಕುಪ್ಪಿ ಮುರುಗೇಶಪ್ಪ, ಸಂಗಪ್ಪ, ಅಕ್ಕಿ ಚನ್ನಪ್ಪ, ಮೈಸೂರುಮಠದ ಮುಪ್ಪಯ್ಯ, ಮಹದೇವಮ್ಮ, ಇಶಾನಾಯ್ಕ, ಶರಣ ಬಸವ, ಕೀರ್ತಿಕುಮಾರ, ಕುಮಾರಸ್ವಾಮಿ, ಎಂ.ಸಿ.ರೇಖಾ ಇದ್ದರು. ಬಸವಕಲಾ ಲೋಕದ ಕಲಾವಿದರು ಜನಜಾಗೃತಿ ಗೀತೆಗಳನ್ನು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ದೇವರು, ಧರ್ಮದ ಹೆಸರಲ್ಲಿ ಜನರನ್ನು ಶೋಷಣೆ ಮಾಡಲಾಗುತ್ತಿದೆ. ಟಿ.ವಿ.ಗಳಲ್ಲಿ ಬೆಳಿಗ್ಗೆ ಬರುವ ಗುರೂಜಿಗಳಿಂದಾಗಿ ಬದುಕಿನ ನೆಮ್ಮದಿಯೇ ಹಾಳಾಗಿದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.</p>.<p>ಜಯದೇವಶ್ರೀಗಳ 63ನೇ ಸ್ಮರಣೋತ್ಸವ ಪ್ರಯುಕ್ತ ದೊಡ್ಡಪೇಟೆ ವಿರಕ್ತಮಠದಲ್ಲಿ ಜನಜಾಗೃತಿ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.</p>.<p>ಸೂರ್ಯಗ್ರಹಣ ಹಿಡಿದ ಸಮಯದಲ್ಲಿ ಮೌಢ್ಯದಿಂದಾಗಿ ದೇಶವೇ ಬಂದ್ ಆಗಿತ್ತು. ಮೂಢನಂಬಿಕೆಗೆ ಬಲಿಯಾಗಬಾರದು. ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು. ಅಜ್ಞಾನವನ್ನು ಕಿತ್ತು ಹಾಕಿದಾಗ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ. ಕಂದಾಚಾರ, ಜಾತೀಯತೆ, ಬಡತನ, ಅನಕ್ಷರತೆ ಹೋಗಲಾಡಿಸಲು ಜನಜಾಗೃತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ವಿರಕ್ತಮಠದಿಂದ ಮದಕರಿನಾಯಕ ವೃತ್ತ, ಸ್ವಾಗೇರಪೇಟೆ, ಕಾಯಿಪೇಟೆ, ವಿಜಯಲಕ್ಷ್ಮಿ ರಸ್ತೆಯ ಮೂಲಕ ಜನಜಾಗೃತಿ ಪಾದಯಾತ್ರೆ ಸಾಗಿತು.</p>.<p>ಶಿರಗುಪ್ಪ ಬಸವಭೂಷಣ ಸ್ವಾಮೀಜಿ, ಎಚ್.ಕೆ. ರಾಮಚಂದ್ರಪ್ಪ, ಕಣಕುಪ್ಪಿ ಮುರುಗೇಶಪ್ಪ, ಸಂಗಪ್ಪ, ಅಕ್ಕಿ ಚನ್ನಪ್ಪ, ಮೈಸೂರುಮಠದ ಮುಪ್ಪಯ್ಯ, ಮಹದೇವಮ್ಮ, ಇಶಾನಾಯ್ಕ, ಶರಣ ಬಸವ, ಕೀರ್ತಿಕುಮಾರ, ಕುಮಾರಸ್ವಾಮಿ, ಎಂ.ಸಿ.ರೇಖಾ ಇದ್ದರು. ಬಸವಕಲಾ ಲೋಕದ ಕಲಾವಿದರು ಜನಜಾಗೃತಿ ಗೀತೆಗಳನ್ನು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>