<p>ದಾವಣಗೆರೆ: ಕಡಿಮೆ ದರಕ್ಕೆ ಬಂಗಾರದ ನಾಣ್ಯ ನೀಡುವುದಾಗಿ ನಂಬಿಸಿ ನಕಲಿ ಬಂಗಾರದ ಬಿಲ್ಲೆ ನೀಡಿ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಹೊನ್ನಾಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. </p>.<p>ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ಪರಶುರಾಮ ಹಾಗೂ ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ ಗ್ರಾಮದ ಮನೋಜ್ ಬಂಧಿತರು. ಆರೋಪಿಗಳಿಂದ ₹5.90 ಲಕ್ಷ ನಗದು, ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ವಾಹನವನ್ನು ಜಪ್ತಿ ಮಾಡಲಾಗಿದೆ. </p>.<p>ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕುಂದೂರು ಗ್ರಾಮದ ಮೂರ್ತಿ ಕೆ.ವಿ. ಅವರನ್ನು ಪರಿಚಯಿಸಿಕೊಂಡಿದ್ದ ಆರೋಪಿಗಳು ಕಡಿಮೆ ದರಕ್ಕೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿದ್ದರು. ಮೊದಲು ಪರೀಕ್ಷೆ ನಡೆಸಲು ಅಸಲಿ ನಾಣ್ಯ ನೀಡಿದ್ದ ಆರೋಪಿಗಳು, ಖರೀದಿ ವೇಳೆ ನಕಲಿ ನಾಣ್ಯಗಳನ್ನು ನೀಡಿ ₹6 ಲಕ್ಷ ಹಣ ಪಡೆದು ವಂಚಿಸಿದ್ದರು. </p>.<p>ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪರಶುರಾಮ ಈ ಹಿಂದೆ ಸಾಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಜೈಲಿನಿಂದ ಬಿಡುಗಡೆ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಕಡಿಮೆ ದರಕ್ಕೆ ಬಂಗಾರದ ನಾಣ್ಯ ನೀಡುವುದಾಗಿ ನಂಬಿಸಿ ನಕಲಿ ಬಂಗಾರದ ಬಿಲ್ಲೆ ನೀಡಿ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಹೊನ್ನಾಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. </p>.<p>ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ಪರಶುರಾಮ ಹಾಗೂ ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ ಗ್ರಾಮದ ಮನೋಜ್ ಬಂಧಿತರು. ಆರೋಪಿಗಳಿಂದ ₹5.90 ಲಕ್ಷ ನಗದು, ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ವಾಹನವನ್ನು ಜಪ್ತಿ ಮಾಡಲಾಗಿದೆ. </p>.<p>ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕುಂದೂರು ಗ್ರಾಮದ ಮೂರ್ತಿ ಕೆ.ವಿ. ಅವರನ್ನು ಪರಿಚಯಿಸಿಕೊಂಡಿದ್ದ ಆರೋಪಿಗಳು ಕಡಿಮೆ ದರಕ್ಕೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿದ್ದರು. ಮೊದಲು ಪರೀಕ್ಷೆ ನಡೆಸಲು ಅಸಲಿ ನಾಣ್ಯ ನೀಡಿದ್ದ ಆರೋಪಿಗಳು, ಖರೀದಿ ವೇಳೆ ನಕಲಿ ನಾಣ್ಯಗಳನ್ನು ನೀಡಿ ₹6 ಲಕ್ಷ ಹಣ ಪಡೆದು ವಂಚಿಸಿದ್ದರು. </p>.<p>ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪರಶುರಾಮ ಈ ಹಿಂದೆ ಸಾಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಜೈಲಿನಿಂದ ಬಿಡುಗಡೆ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>