ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗೆ ಬಿದ್ದ ಕಾರು: ಪ್ರಯಾಣಿಕರು ಪಾರು

Last Updated 19 ಜನವರಿ 2022, 15:09 IST
ಅಕ್ಷರ ಗಾತ್ರ

ದಾವಣಗೆರೆ: ಹರಿಹರದಿಂದ ದಾವಣಗೆರೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಾತಿ ಕೆರೆಗೆ ಬಿದ್ದಿದೆ. ಕಾರಲ್ಲಿದ್ದ ಮೂವರೂ ಪವಾಡಸದೃಶವಾಗಿ ಪಾರಾಗಿದ್ದಾರೆ.

ಹರಿಹರ ಅಮರಾವತಿ ಬಡಾವಣೆಯ ಮುನೀಸ್‌ ಧವನ್‌ ಎಂಬವರು ತನ್ನ ಪತ್ನಿ ಪಪಿಯಾ ಧವನ್‌, ತಾಯಿ ಉಷಾ ಧವನ್‌ ಅವರನ್ನು ಕೂರಿಸಿಕೊಂಡು ದಾವಣಗೆರೆ ಕಡೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಕಾರು ಕೆರೆಗೆ ಬಿದ್ದಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಮೂವರೂ ಕಾರಿನಿಂದ ಹೊರಗೆ ಬಂದಿದ್ದಾರೆ. ಬಳಿಕ ಕ್ರೇನ್‌ ಮೂಲಕ ಕಾರನ್ನು ಮೇಲೆಕ್ಕೆತ್ತಲಾಯಿತು ಎಂದು ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT