ತಾಲೂಕಿನ ಬನ್ನಿಕೋಡು ಗ್ರಾಮದ ರೈತ ಸಿದ್ದಪ್ಪ ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಘ ಹಾಗೂ ಹಲವರ ಬಳಿ ಕೈಗಡ ಸೇರಿ ₹ 12 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು. ಇದರಿಂದ ನೊಂದು ಜ.14ರಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿದ್ದಪ್ಪ ಅವರನ್ನು ದಾವಣಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಜ.16ರಂದು ಸಾವನ್ನಪ್ಪಿದ್ದಾರೆ.