ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹರಿಹರ | ಸಾಲದ ಹೊರೆ:  ರೈತ ಆತ್ಮಹತ್ಯೆ  

Published 17 ಜನವರಿ 2024, 7:16 IST
Last Updated 17 ಜನವರಿ 2024, 7:16 IST
ಅಕ್ಷರ ಗಾತ್ರ

ಹರಿಹರ: ಸಾಲದ ಹೊರೆ ತಾಳಲಾರದೆ ತಾಲ್ಲೂಕಿನ ಬನ್ನಿಕೋಡು ಗ್ರಾಮದ ಕರೆಕಾಳವ್ವರ ಸಿದ್ದಪ್ಪ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲೂಕಿನ ಬನ್ನಿಕೋಡು ಗ್ರಾಮದ ರೈತ ಸಿದ್ದಪ್ಪ ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಘ ಹಾಗೂ ಹಲವರ ಬಳಿ ಕೈಗಡ ಸೇರಿ ₹ 12 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು. ಇದರಿಂದ ನೊಂದು ಜ.14ರಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿದ್ದಪ್ಪ ಅವರನ್ನು ದಾವಣಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಜ.16ರಂದು ಸಾವನ್ನಪ್ಪಿದ್ದಾರೆ.

ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮಳೆ ಇಲ್ಲದೆ ಬೆಳೆ ಕೈ ಕೊಟ್ಟಿರುವ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT