ರೈತ ಸಂಪರ್ಕ ಕೇಂದ್ರದ ಕಚೇರಿಯನ್ನು ಹರೋಸಾಗರ ಗ್ರಾಮಕ್ಕೆ ಸ್ಥಳಾಂತರಿಸಿರುವುದು ಬಹುಪಾಲು ರೈತರಿಗೆ ಗೊತ್ತೇ ಇಲ್ಲ. ರೈತ ಸಂಪರ್ಕ ಕೇಂದ್ರ ಮುಚ್ಚಿದೆ ಎಂದೇ ರೈತರು ಭಾವಿಸಿದ್ದು, ಇಲಾಖೆಯ ಸೌಲಭ್ಯಗಳನ್ನು ಪಡೆಯದೇ ಹಿಂತಿರುಗುತ್ತಿದ್ದಾರೆ. ಕಚೇರಿಯನ್ನು ಸ್ಥಳಾಂತರಿಸಿರುವ ಬಗ್ಗೆ ಸಾರ್ವಜನಿಕವಾಗಿ ಕೃಷಿ ಇಲಾಖೆ ತಿಳಿಸಿಲ್ಲ. ಕನಿಷ್ಠ ಪಕ್ಷ ಈಗ ನಿರ್ಮಿಸುತ್ತಿರುವ ಕಟ್ಟಡದ ಮುಂದೆ ಒಂದು ಸೂಚನಾ ಫಲಕವನ್ನೂ ಹಾಕಿಲ್ಲ.