<p><strong>ದಾವಣಗೆರೆ:</strong> ಬ್ಯಾಂಕೇತರ ಹಣಕಾಸು ಕಂಪನಿಗಳು (ಎನ್ಬಿಎಫ್ಸಿ) ಗ್ರಾಮೀಣ ಪ್ರದೇಶದ ಜನರಿಗೆ ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಸೋಮವಾರ ಇಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತರೊಬ್ಬರು ಎದೆನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ.</p><p>ಚನ್ನಗಿರಿ ತಾಲ್ಲೂಕಿನ ಮಲ್ಲಿಗೇನಹಳ್ಳಿಯ ಹನುಮಂತಪ್ಪ (50) ಮೃತರು. ಇವರು ರಾಜ್ಯ ರೈತ ಸಂಘದ ಚನ್ನಗಿರಿ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿದ್ದರು.</p><p>ಬ್ಯಾಂಕೇತರ ಹಣಕಾಸು ಕಂಪನಿಗಳು ‘ಸರ್ಫೇಸಿ’ (ಆರ್ಥಿಕ ಸ್ವತ್ತುಗಳ ಭದ್ರತೆ, ಪುನಾರಚನೆ ಹಾಗೂ ಭದ್ರತೆ) ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡು ರೈತರಿಗೆ ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಹನುಮಂತಪ್ಪ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.</p><p>‘ಹೃದಯ ಸಂಬಂಧಿ ಸಮಸ್ಯೆ ಪತ್ತೆಯಾಗಿದ್ದರಿಂದ ಹೆಚ್ಚುವರಿ ಚಿಕಿತ್ಸೆಗೆ ಬಾಪೂಜಿ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚಿಸಿದ್ದರು. ಹನುಮಂತಪ್ಪ ಅವರು ಸ್ನೇಹಿತರೊಂದಿಗೆ ಕಾಲ್ನಡಿಗೆಯಲ್ಲಿ ಆಸ್ಪತ್ರೆಗೆ ಸಾಗುತ್ತಿದ್ದಾಗ ಹೃದಯಾಘತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ’ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬ್ಯಾಂಕೇತರ ಹಣಕಾಸು ಕಂಪನಿಗಳು (ಎನ್ಬಿಎಫ್ಸಿ) ಗ್ರಾಮೀಣ ಪ್ರದೇಶದ ಜನರಿಗೆ ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಸೋಮವಾರ ಇಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತರೊಬ್ಬರು ಎದೆನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ.</p><p>ಚನ್ನಗಿರಿ ತಾಲ್ಲೂಕಿನ ಮಲ್ಲಿಗೇನಹಳ್ಳಿಯ ಹನುಮಂತಪ್ಪ (50) ಮೃತರು. ಇವರು ರಾಜ್ಯ ರೈತ ಸಂಘದ ಚನ್ನಗಿರಿ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿದ್ದರು.</p><p>ಬ್ಯಾಂಕೇತರ ಹಣಕಾಸು ಕಂಪನಿಗಳು ‘ಸರ್ಫೇಸಿ’ (ಆರ್ಥಿಕ ಸ್ವತ್ತುಗಳ ಭದ್ರತೆ, ಪುನಾರಚನೆ ಹಾಗೂ ಭದ್ರತೆ) ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡು ರೈತರಿಗೆ ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಹನುಮಂತಪ್ಪ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.</p><p>‘ಹೃದಯ ಸಂಬಂಧಿ ಸಮಸ್ಯೆ ಪತ್ತೆಯಾಗಿದ್ದರಿಂದ ಹೆಚ್ಚುವರಿ ಚಿಕಿತ್ಸೆಗೆ ಬಾಪೂಜಿ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚಿಸಿದ್ದರು. ಹನುಮಂತಪ್ಪ ಅವರು ಸ್ನೇಹಿತರೊಂದಿಗೆ ಕಾಲ್ನಡಿಗೆಯಲ್ಲಿ ಆಸ್ಪತ್ರೆಗೆ ಸಾಗುತ್ತಿದ್ದಾಗ ಹೃದಯಾಘತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ’ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>