‘ಈ ಯೋಜನೆಯಡಿ ಕೃಷಿ ಭೂಮಿ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ಮೂರು ಕಂತುಗಳಲ್ಲಿ ವಾರ್ಷಿಕ ₹ 6,000 ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ
₹ 4,000 ಆರ್ಥಿಕ ನೆರವು ದೊರಕಿದ್ದು, ಜಿಲ್ಲೆಯಲ್ಲಿ ನೋಂದಣಿಯಾದ ಎಲ್ಲಾ ರೈತರಿಗೆ ಹಣ ಜಮೆಯಾಗಿದೆ’ ಎಂದು ಮಾಹಿತಿ ನೀಡಿದರು. ‘ಭೂ ಮಾಲೀಕತ್ವ ಹೊಂದಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೌಕರರು ಹಾಗೂ ಸರ್ಕಾರಕ್ಕೆ ಆದಾಯ ತೆರಿಗೆ ಪಾವತಿಸುವವರನ್ನು ಈ ಯೋಜನೆಯಿಂದ ಸಂಪೂರ್ಣ ಹೊರಗೆ ಇಡಲಾಗಿದ್ದು, ಕೆಲವು ಕಡೆಗಳಲ್ಲಿ ಪತಿ ಹಾಗೂ ಪತ್ನಿ ಇಬ್ಬರಿಗೂ ಕಿಸಾನ್ ಸಮ್ಮಾನ್ ಹಣ ಪಾವತಿಯಾಗಿರುವ ನಿದರ್ಶನಗಳು ಇದ್ದು, ಅವರೆಲ್ಲಾ ಹಣವನ್ನು ವಾಪಸ್ ನೀಡಿದ್ದಾರೆ’ ಎಂದು ಅವರು ಹೇಳಿದರು.