<p><strong>ದಾವಣಗೆರೆ:</strong> ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯ 1,50,841 ರೈತರಿಗೆ ಈವರೆಗೆ (7 ಕಂತು ಸೇರಿ) ₹ 253 ಕೋಟಿ ಹಣ ರೈತರ ಖಾತೆಗಳಿಗೆ ಜಮೆಯಾಗಿದೆ.</p>.<p>‘ಚನ್ನಗಿರಿ ತಾಲ್ಲೂಕಿನಲ್ಲಿ ಹೆಚ್ಚು ಫಲಾನುಭವಿಗಳು ಇದ್ದು, ಹರಿಹರ ತಾಲ್ಲೂಕಿನಲ್ಲಿ ಕಡಿಮೆ ಫಲಾನುಭವಿಗಳು ಇದ್ದಾರೆ. ಕೇಂದ್ರ ಸರ್ಕಾರದಿಂದ ₹ 198 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ ₹ 54 ಕೋಟಿ ರೈತರ ಖಾತೆಗೆ ಸಂದಾಯವಾಗಿದೆ. ಕಳೆದ ತಿಂಗಳು 7ನೇ ಕಂತು ಜಮೆಯಾಗಿದೆ’ ಎಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಮಾಹಿತಿ ನೀಡಿದರು.</p>.<p>‘ಈ ಯೋಜನೆಯಡಿ ಕೃಷಿ ಭೂಮಿ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ಮೂರು ಕಂತುಗಳಲ್ಲಿ ವಾರ್ಷಿಕ ₹ 6,000 ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ<br />₹ 4,000 ಆರ್ಥಿಕ ನೆರವು ದೊರಕಿದ್ದು, ಜಿಲ್ಲೆಯಲ್ಲಿ ನೋಂದಣಿಯಾದ ಎಲ್ಲಾ ರೈತರಿಗೆ ಹಣ ಜಮೆಯಾಗಿದೆ’ ಎಂದು ಮಾಹಿತಿ ನೀಡಿದರು. ‘ಭೂ ಮಾಲೀಕತ್ವ ಹೊಂದಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೌಕರರು ಹಾಗೂ ಸರ್ಕಾರಕ್ಕೆ ಆದಾಯ ತೆರಿಗೆ ಪಾವತಿಸುವವರನ್ನು ಈ ಯೋಜನೆಯಿಂದ ಸಂಪೂರ್ಣ ಹೊರಗೆ ಇಡಲಾಗಿದ್ದು, ಕೆಲವು ಕಡೆಗಳಲ್ಲಿ ಪತಿ ಹಾಗೂ ಪತ್ನಿ ಇಬ್ಬರಿಗೂ ಕಿಸಾನ್ ಸಮ್ಮಾನ್ ಹಣ ಪಾವತಿಯಾಗಿರುವ ನಿದರ್ಶನಗಳು ಇದ್ದು, ಅವರೆಲ್ಲಾ ಹಣವನ್ನು ವಾಪಸ್ ನೀಡಿದ್ದಾರೆ’ ಎಂದು ಅವರು ಹೇಳಿದರು.</p>.<p>‘ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಈ ಯೋಜನೆಯ ಸದುಪಯೋಗ ಪಡೆಯಲು ಅರ್ಹರಾಗಿರುವುದರಿಂದ ಜಂಟಿ ಖಾತೆ ಇರುವ ಕೆಲವರಿಗೆ ಹಣ ಬಂದಿಲ್ಲ. ಕೆಲವೊಂದು ಸಮಸ್ಯೆ ಬಿಟ್ಟರೆ ಈ ಹಣದಿಂದ ತುಂಬಾ ಅನುಕೂಲವಾಗಿದೆ’ ಎನ್ನುತ್ತಾರೆ ರಾಮೇಶ್ವರ ಗ್ರಾಮದ ರೈತ ರಾಕೇಶ್.</p>.<p>‘ರಸಗೊಬ್ಬರದ ಬೆಲೆಯೂ ಜಾಸ್ತಿಯಾಗಿದೆ. ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರದ ಖರೀದಿಗೆ ಹಣವಿಲ್ಲದ ಸಂದರ್ಭದಲ್ಲಿ ಕಿಸಾನ್ ಸಮ್ಮಾನ್ ನೆರವಿಗೆ ಬಂದಿದೆ. ನೇರವಾಗಿ ರೈತರ ಖಾತೆಗಳಿಗೆ ಹಣ ಜಮೆಯಾಗುವುದರಿಂದ ಇದರಿಂದ ಸಾಕಷ್ಟು ಪ್ರಯೋಜನವಾಗಿದೆ’ ಎಂದು ಅವರು ಹೇಳುತ್ತಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯ 1,50,841 ರೈತರಿಗೆ ಈವರೆಗೆ (7 ಕಂತು ಸೇರಿ) ₹ 253 ಕೋಟಿ ಹಣ ರೈತರ ಖಾತೆಗಳಿಗೆ ಜಮೆಯಾಗಿದೆ.</p>.<p>‘ಚನ್ನಗಿರಿ ತಾಲ್ಲೂಕಿನಲ್ಲಿ ಹೆಚ್ಚು ಫಲಾನುಭವಿಗಳು ಇದ್ದು, ಹರಿಹರ ತಾಲ್ಲೂಕಿನಲ್ಲಿ ಕಡಿಮೆ ಫಲಾನುಭವಿಗಳು ಇದ್ದಾರೆ. ಕೇಂದ್ರ ಸರ್ಕಾರದಿಂದ ₹ 198 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ ₹ 54 ಕೋಟಿ ರೈತರ ಖಾತೆಗೆ ಸಂದಾಯವಾಗಿದೆ. ಕಳೆದ ತಿಂಗಳು 7ನೇ ಕಂತು ಜಮೆಯಾಗಿದೆ’ ಎಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಮಾಹಿತಿ ನೀಡಿದರು.</p>.<p>‘ಈ ಯೋಜನೆಯಡಿ ಕೃಷಿ ಭೂಮಿ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ಮೂರು ಕಂತುಗಳಲ್ಲಿ ವಾರ್ಷಿಕ ₹ 6,000 ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ<br />₹ 4,000 ಆರ್ಥಿಕ ನೆರವು ದೊರಕಿದ್ದು, ಜಿಲ್ಲೆಯಲ್ಲಿ ನೋಂದಣಿಯಾದ ಎಲ್ಲಾ ರೈತರಿಗೆ ಹಣ ಜಮೆಯಾಗಿದೆ’ ಎಂದು ಮಾಹಿತಿ ನೀಡಿದರು. ‘ಭೂ ಮಾಲೀಕತ್ವ ಹೊಂದಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೌಕರರು ಹಾಗೂ ಸರ್ಕಾರಕ್ಕೆ ಆದಾಯ ತೆರಿಗೆ ಪಾವತಿಸುವವರನ್ನು ಈ ಯೋಜನೆಯಿಂದ ಸಂಪೂರ್ಣ ಹೊರಗೆ ಇಡಲಾಗಿದ್ದು, ಕೆಲವು ಕಡೆಗಳಲ್ಲಿ ಪತಿ ಹಾಗೂ ಪತ್ನಿ ಇಬ್ಬರಿಗೂ ಕಿಸಾನ್ ಸಮ್ಮಾನ್ ಹಣ ಪಾವತಿಯಾಗಿರುವ ನಿದರ್ಶನಗಳು ಇದ್ದು, ಅವರೆಲ್ಲಾ ಹಣವನ್ನು ವಾಪಸ್ ನೀಡಿದ್ದಾರೆ’ ಎಂದು ಅವರು ಹೇಳಿದರು.</p>.<p>‘ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಈ ಯೋಜನೆಯ ಸದುಪಯೋಗ ಪಡೆಯಲು ಅರ್ಹರಾಗಿರುವುದರಿಂದ ಜಂಟಿ ಖಾತೆ ಇರುವ ಕೆಲವರಿಗೆ ಹಣ ಬಂದಿಲ್ಲ. ಕೆಲವೊಂದು ಸಮಸ್ಯೆ ಬಿಟ್ಟರೆ ಈ ಹಣದಿಂದ ತುಂಬಾ ಅನುಕೂಲವಾಗಿದೆ’ ಎನ್ನುತ್ತಾರೆ ರಾಮೇಶ್ವರ ಗ್ರಾಮದ ರೈತ ರಾಕೇಶ್.</p>.<p>‘ರಸಗೊಬ್ಬರದ ಬೆಲೆಯೂ ಜಾಸ್ತಿಯಾಗಿದೆ. ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರದ ಖರೀದಿಗೆ ಹಣವಿಲ್ಲದ ಸಂದರ್ಭದಲ್ಲಿ ಕಿಸಾನ್ ಸಮ್ಮಾನ್ ನೆರವಿಗೆ ಬಂದಿದೆ. ನೇರವಾಗಿ ರೈತರ ಖಾತೆಗಳಿಗೆ ಹಣ ಜಮೆಯಾಗುವುದರಿಂದ ಇದರಿಂದ ಸಾಕಷ್ಟು ಪ್ರಯೋಜನವಾಗಿದೆ’ ಎಂದು ಅವರು ಹೇಳುತ್ತಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>