‘ಲಿಂಗಾಯತ ಶಾಸಕರ ಸಂಖ್ಯೆಗೆ ಅನುಗುಣವಾಗಿ ಸಚಿವ ಸ್ಥಾನವನ್ನು ನಿಗದಿ ಮಾಡಬೇಕಿತ್ತು. ಆದರೆ, ಪ್ರಸ್ತುತ ಆಯ್ಕೆಯಿಂದ ಲಿಂಗಾಯತ ಸಮಾಜಕ್ಕೆ ಅವಮಾನವಾಗಿದೆ. ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗಾಗಿನ ಹೋರಾಟದಲ್ಲಿ ಎಂ.ಬಿ.ಪಾಟೀಲ ಮುಂಚೂಣಿಯಲ್ಲಿ ಇದ್ದುದರಿಂದ ಅವರನ್ನು ಕಡೆಗಣಿಸಲಾಗುತ್ತಿದೆಯೇ ಎಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ. ವಿಳಂಬ ಮಾಡದೇ, ಎಂ.ಬಿ.ಪಾಟೀಲರಿಗೆ ಸಚಿವ ಸ್ಥಾನ ಕೊಡಬೇಕು’ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.