ರೈತರ ವಿರೋಧದದ ನಡುವೆಯೂ ರೈತ ಭವನದ ಎದುರು ಇದ್ದ ಹೂವಿನ ಮಾರುಕಟ್ಟೆಯನ್ನು ಈ ಹಿಂದಿನ ಜಿಲ್ಲಾಧಿಕಾರಿಗಳು ಸ್ಥಳಾಂತರಿಸಿದ್ದರು.ಪೊಲೀಸ್ ಚೌಕಿ, ಎಟಿಎಂ ಆರಂಭ, ಪೊಲೀಸ್ ಬೀಟ್ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವುಗಳು ಈಡೇರಿಲ್ಲ ಎಂದು ಆರೋಪಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ನಗರ ಡಿವೈಎಸ್ ಪಿ ಮಲ್ಲೇಶ್ ಡಿ., ಸಿಪಿಐ ಕೆ.ಎನ್.ಗಜೇಂದ್ರಪ್ಪ ಹಾಗೂ ಸಿಬ್ಬಂದಿ ರೈತರ ಮನವೊಲಿಸುವ ಪ್ರಯತ್ನ ನಡೆಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.
ಗೂಂಡಾಗಳನ್ನು ಶೀಘ್ರ ಬಂಧಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಸ್ಥಗಿತಗೊಳಿಸಿದರು.