ಅಪರಾಧ ತಡೆ ಮಾಸಾಚರಣೆ: ಡಿಸೆಂಬರ್ ತಿಂಗಳು ಪೂರ್ತಿ ಅಪರಾಧ ತಡೆ ಮಾಸಾಚರಣೆ ನಡೆಯಲಿದ್ದು, ಡಿಸೆಂಬರ್ 4ರಂದು ಶುಕ್ರವಾರ ಜಯದೇವ ವೃತ್ತದಿಂದ ಸೈಕಲ್ ಜಾಥಾ ಆರಂಭಿಸಲಾಗುವುದು. ಆರ್ಟಿಒ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಈ ಜಾಥಾವನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಎಎಸ್ಪಿ ಎಂ.ರಾಜೀವ್, ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ, ಸಿಪಿಐ ದೇವರಾಜ್ ಇದ್ದರು.