ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ| ಫಾದರ್ ಸ್ಟ್ಯಾನ್ ಸ್ವಾಮಿ ಬಂಧನ: ಖಂಡನೆ

Last Updated 15 ಅಕ್ಟೋಬರ್ 2020, 16:53 IST
ಅಕ್ಷರ ಗಾತ್ರ

ದಾವಣಗೆರೆ: ಭೀಮಾ ಕೊರೊಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿರುವುದನ್ನು ಖಂಡಿಸಿ ಹಾಗೂ ಅವರ ಬಿಡುಗಡೆಗೆ ಆಗ್ರಹಿಸಿಜನ ಸಂಘಟನೆಗಳ ಒಕ್ಕೂಟದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಫಾದರ್ ಸ್ಟ್ಯಾನ್ ಸ್ವಾಮಿ ಅವರ ಮೇಲೆ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಮಾನವೀಯತೆಯ ಪರ, ಅಸಹಾಯಕರ ಪರ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಸರ್ಕಾರದ ಸಂವಿಧಾನ ವಿರೋಧಿಯಾಗಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸುವವರನ್ನೆಲ್ಲಾ ಬಂಧಿಸಲಾಗುತ್ತಿದೆ. ಇಳಿವಯಸ್ಸಿನಫಾದರ್ ಸ್ಟ್ಯಾನ್ ಸ್ವಾಮಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಫಾದರ್ ಎರಿಕ್ ಮತಾಯಸ್, ಫಾದರ್ ರಾಯಪ್ಪ, ಸನ್ನಿ ಗುಡಿನ್ಹೊ, ಪೀಪಲ್ಸ್ ಲಾಯರ್ಸ್ ಗಿಲ್ಡ್‌ನ ಜಿಲ್ಲಾ ಘಟಕದ ಅಧ್ಯಕ್ಷ ಅನಿಸ್ ಪಾಷಾ, ಮಾದಿಗ ದಂಡೋರ ಸಂಘಟನೆಯ ಅಧ್ಯಕ್ಷ ಗುಡ್ಡಪ್ಪ, ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್ ಹಾಗೂ ಹಲವು ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT