ಕರೇಕಟ್ಟೆ ಗ್ರಾಮದಲ್ಲಿ ಭಾನುವಾರ ವಲಯಮಟ್ಟದ ಪ್ರೌಢಶಾಲೆಯ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟ ನಡೆಯುತ್ತಿದ್ದ ವೇಳೆ ಈ ಮೂವರು ಕ್ರೀಡಾಕೂಟ ವೀಕ್ಷಿಸುತ್ತಿದ್ದರು. ಆ ವೇಳೆ ರಾಘವೇಂದ್ರ ಬಾಲಕಿಯರ ಕುರಿತು ಅಸಭ್ಯ ಮಾತುಗಳನ್ನು ಆಡಿದ್ದಾನೆ. ಇದನ್ನು ಪ್ರಶ್ನಿಸಿದ ಸುನೀಲ ಹಾಗೂ ದೇವೇಂದ್ರ ಅವರಿಗೆ ಚಾಕುವಿನಿಂದ ಇರಿದಿದ್ದು, ಗಾಯಗೊಂಡ ಇವರನ್ನು ದಾವಣಗೆರೆಯ ಸಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿದೆ.