<p><strong>ದಾವಣಗೆರೆ:</strong> ವಿವಿಧ ಕಲ್ಯಾಣ ಮಂಟಪಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದ ಕಲ್ಯಾಣ ಮಂಟಪದ ಮಾಲೀಕರಿಗೆ, ವಧು–ವರರ ಕಡೆಯವರಿಗೆ ಭಾನುವಾರ ದಂಡ ವಿಧಿಸಲಾಗಿದೆ.</p>.<p>ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ತಹಶೀಲ್ದಾರ್ ಗಿರೀಶ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಭಾನುವಾರ ರಾತ್ರಿ ವಿವಿಧ ಕಲ್ಯಾಣ ಮಂಟಪಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿಯಮ ಉಲ್ಲಂಘನೆ ಮಾಡಿದವರಿಗೆ ಬಿಸಿ ಮುಟ್ಟಿಸಿದ್ದಾರೆ.</p>.<p>ಮದುವೆ ಕಾರ್ಯಕ್ರಮಗಳಿದ್ದ ಸರ್ಕಾರಿ ನೌಕರರ ಭವನ, ಬಕ್ಕೇಶ್ವರ ಕಲ್ಯಾಣ ಮಂಟಪ, ಬಾಪೂಜಿ ಸಮುದಾಯ ಭವನ, ರಾಜನಹಳ್ಳಿ ಸಮುದಾಯ ಭವನ, ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪಗಳಲ್ಲಿ ಪರಿಶೀಲನೆ ನಡೆಸಿದರು. ಮಾಸ್ಕ್ ಹಾಕದೇ ಇರುವವರಿಗೆ ತಲಾ ₹ 250ರಂತೆ ದಂಡ ವಿಧಿಸಿದರು.</p>.<p>ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ಅಡುಗೆಯವರು ಸೇರಿ ಸಿಬ್ಬಂದಿ ಮಾಸ್ಕ್ ಧರಿಸಿರಲಿಲ್ಲ. ಅಂತರ ಕಾಯ್ದುಕೊಂಡಿರಲಿಲ್ಲ. ಕೊರೊನಾ ಮುಂಜಾಗ್ರತಾ ನಿಯಮಗಳನ್ನು ಪಾಲಿಸಿರಲಿಲ್ಲ. ಹಾಗಾಗಿ ಕಲ್ಯಾಣ ಮಂಟಪದ ಮಾಲೀಕರಿಗೆ ₹ 10 ಸಾವಿರ ದಂಡ ವಿಧಿಸಲಾಯಿತು.</p>.<p>ಬಾಪೂಜಿ ಸಮುದಾಯ ಭವನದಲ್ಲಿ ನಿಗದಿತ ಸಂಖ್ಯೆ ಮೀರಿ ಜನರು ಮದುವೆಯಲ್ಲಿ ಭಾಗವಹಿಸಿದ್ದರು. ಅದಕ್ಕಾಗಿ ವಧು ಮತ್ತು ವರನ ಕಡೆಯವರಿಗೆ ತಲಾ ₹ 10 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು. ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಒಂದು ಕುರ್ಚಿ ಬಿಟ್ಟು ಒಂದು ಕುರ್ಚಿಗೆ ಹಗ್ಗ ಕಟ್ಟಿ ಕುಳಿತುಕೊಳ್ಳದಂತೆ ವ್ಯವಸ್ಥೆ ಮಾಡಿ ಅಂತರ ಕಾಪಾಡಿರುವುದು ಗಮನ ಸೆಳೆಯಿತು.</p>.<p>ಎಲ್ಲಾ ಕಲ್ಯಾಣ ಮಂಟಪಗಳು ಕೋವಿಡ್ ನಿಯಮ ಪಾಲಿಸಬೇಕು ಎಂದು ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಪಾಲಿಕೆ ಆಯುಕ್ತರು ಪ್ರತ್ಯೇಕವಾಗಿ ನೋಟಿಸ್ ಜಾರಿ ಮಾಡಿದರು. ಸಿಪಿಐ ಗುರುಬಸವರಾಜ್ ಭದ್ರತೆ ಒದಗಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ವಿವಿಧ ಕಲ್ಯಾಣ ಮಂಟಪಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದ ಕಲ್ಯಾಣ ಮಂಟಪದ ಮಾಲೀಕರಿಗೆ, ವಧು–ವರರ ಕಡೆಯವರಿಗೆ ಭಾನುವಾರ ದಂಡ ವಿಧಿಸಲಾಗಿದೆ.</p>.<p>ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ತಹಶೀಲ್ದಾರ್ ಗಿರೀಶ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಭಾನುವಾರ ರಾತ್ರಿ ವಿವಿಧ ಕಲ್ಯಾಣ ಮಂಟಪಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿಯಮ ಉಲ್ಲಂಘನೆ ಮಾಡಿದವರಿಗೆ ಬಿಸಿ ಮುಟ್ಟಿಸಿದ್ದಾರೆ.</p>.<p>ಮದುವೆ ಕಾರ್ಯಕ್ರಮಗಳಿದ್ದ ಸರ್ಕಾರಿ ನೌಕರರ ಭವನ, ಬಕ್ಕೇಶ್ವರ ಕಲ್ಯಾಣ ಮಂಟಪ, ಬಾಪೂಜಿ ಸಮುದಾಯ ಭವನ, ರಾಜನಹಳ್ಳಿ ಸಮುದಾಯ ಭವನ, ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪಗಳಲ್ಲಿ ಪರಿಶೀಲನೆ ನಡೆಸಿದರು. ಮಾಸ್ಕ್ ಹಾಕದೇ ಇರುವವರಿಗೆ ತಲಾ ₹ 250ರಂತೆ ದಂಡ ವಿಧಿಸಿದರು.</p>.<p>ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ಅಡುಗೆಯವರು ಸೇರಿ ಸಿಬ್ಬಂದಿ ಮಾಸ್ಕ್ ಧರಿಸಿರಲಿಲ್ಲ. ಅಂತರ ಕಾಯ್ದುಕೊಂಡಿರಲಿಲ್ಲ. ಕೊರೊನಾ ಮುಂಜಾಗ್ರತಾ ನಿಯಮಗಳನ್ನು ಪಾಲಿಸಿರಲಿಲ್ಲ. ಹಾಗಾಗಿ ಕಲ್ಯಾಣ ಮಂಟಪದ ಮಾಲೀಕರಿಗೆ ₹ 10 ಸಾವಿರ ದಂಡ ವಿಧಿಸಲಾಯಿತು.</p>.<p>ಬಾಪೂಜಿ ಸಮುದಾಯ ಭವನದಲ್ಲಿ ನಿಗದಿತ ಸಂಖ್ಯೆ ಮೀರಿ ಜನರು ಮದುವೆಯಲ್ಲಿ ಭಾಗವಹಿಸಿದ್ದರು. ಅದಕ್ಕಾಗಿ ವಧು ಮತ್ತು ವರನ ಕಡೆಯವರಿಗೆ ತಲಾ ₹ 10 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು. ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಒಂದು ಕುರ್ಚಿ ಬಿಟ್ಟು ಒಂದು ಕುರ್ಚಿಗೆ ಹಗ್ಗ ಕಟ್ಟಿ ಕುಳಿತುಕೊಳ್ಳದಂತೆ ವ್ಯವಸ್ಥೆ ಮಾಡಿ ಅಂತರ ಕಾಪಾಡಿರುವುದು ಗಮನ ಸೆಳೆಯಿತು.</p>.<p>ಎಲ್ಲಾ ಕಲ್ಯಾಣ ಮಂಟಪಗಳು ಕೋವಿಡ್ ನಿಯಮ ಪಾಲಿಸಬೇಕು ಎಂದು ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಪಾಲಿಕೆ ಆಯುಕ್ತರು ಪ್ರತ್ಯೇಕವಾಗಿ ನೋಟಿಸ್ ಜಾರಿ ಮಾಡಿದರು. ಸಿಪಿಐ ಗುರುಬಸವರಾಜ್ ಭದ್ರತೆ ಒದಗಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>