<p><strong>ಹರಪನಹಳ್ಳಿ:</strong> ತಾಲ್ಲೂಕಿನ ದುಗ್ಗಾವತಿಯಲ್ಲಿರುವ ಮಾಜಿ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ ಅವರ ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ.</p>.<p>ರಘು ಮೃತಪಟ್ಟವರು. ಶಾಮನೂರು ಸಕ್ಕರೆ ಕಾರ್ಖಾನೆ ಆವರಣದಲ್ಲಿರುವ ಜಾನ್ ಡಿಸ್ಟಿಲರೀಸ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಯೂನಿಟ್ ಸ್ಯಾಂಸನ್ ಡಿಸ್ಟಿಲರೀಸ್ ಘಟಕಗಳಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಒಳಗಡೆ ಅನೇಕ ಮಂದಿ ಕೆಲಸ ಮಾಡುತ್ತಿದ್ದರು.</p>.<p>ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಗೋಡೆಗಳು ಕುಸಿಯುತ್ತಿವೆ. ಆಲ್ಕೋಹಾಲ್ ಟ್ಯಾಂಕ್ ವೆಲ್ಡಿಂಗ್ ಮಾಡುವಾಗ ಬೆಂಕಿ ಅವಘಡ ಸಂಭವಿಸಿದೆ. ಮದ್ಯ ತಯಾರಿಕಾ ಘಟಕವಾಗಿದ್ದರಿಂದ ಸಾಕಷ್ಟು ಪ್ರಮಾಣದ ಮದ್ಯದ ಬಾಟೆಲ್ಗಳನ್ನು ಗೋದಾಮಿನಲ್ಲಿ ದಾಸ್ತಾನು ಮಾಡಲಾಗಿತ್ತು. ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜು ಮಾಡಲಾಗಿದೆ.</p>.<p>ಹರಪನಹಳ್ಳಿ, ಹರಿಹರ ಮತ್ತು ದಾವಣಗೆರೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ.</p>.<p>ಸ್ಥಳಕ್ಕೆ ತಹಶೀಲ್ದಾರ್ ಎಲ್.ಎಂ.ನಂದೀಶ್ ಬೇಟಿ ನೀಡಿ ಪರಿಶೀಲಿಸಿದರು. ಹಲುವಾಗಲು ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ತಾಲ್ಲೂಕಿನ ದುಗ್ಗಾವತಿಯಲ್ಲಿರುವ ಮಾಜಿ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ ಅವರ ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ.</p>.<p>ರಘು ಮೃತಪಟ್ಟವರು. ಶಾಮನೂರು ಸಕ್ಕರೆ ಕಾರ್ಖಾನೆ ಆವರಣದಲ್ಲಿರುವ ಜಾನ್ ಡಿಸ್ಟಿಲರೀಸ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಯೂನಿಟ್ ಸ್ಯಾಂಸನ್ ಡಿಸ್ಟಿಲರೀಸ್ ಘಟಕಗಳಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಒಳಗಡೆ ಅನೇಕ ಮಂದಿ ಕೆಲಸ ಮಾಡುತ್ತಿದ್ದರು.</p>.<p>ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಗೋಡೆಗಳು ಕುಸಿಯುತ್ತಿವೆ. ಆಲ್ಕೋಹಾಲ್ ಟ್ಯಾಂಕ್ ವೆಲ್ಡಿಂಗ್ ಮಾಡುವಾಗ ಬೆಂಕಿ ಅವಘಡ ಸಂಭವಿಸಿದೆ. ಮದ್ಯ ತಯಾರಿಕಾ ಘಟಕವಾಗಿದ್ದರಿಂದ ಸಾಕಷ್ಟು ಪ್ರಮಾಣದ ಮದ್ಯದ ಬಾಟೆಲ್ಗಳನ್ನು ಗೋದಾಮಿನಲ್ಲಿ ದಾಸ್ತಾನು ಮಾಡಲಾಗಿತ್ತು. ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜು ಮಾಡಲಾಗಿದೆ.</p>.<p>ಹರಪನಹಳ್ಳಿ, ಹರಿಹರ ಮತ್ತು ದಾವಣಗೆರೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ.</p>.<p>ಸ್ಥಳಕ್ಕೆ ತಹಶೀಲ್ದಾರ್ ಎಲ್.ಎಂ.ನಂದೀಶ್ ಬೇಟಿ ನೀಡಿ ಪರಿಶೀಲಿಸಿದರು. ಹಲುವಾಗಲು ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>