<p>ಹೊನ್ನಾಳಿ: ತಾಲ್ಲೂಕಿನ ಸೊರಟೂರು ಗ್ರಾಮದಲ್ಲಿ ಅಗ್ನಿ ಸುರಕ್ಷತಾ ಸಪ್ತಾಹದ ಅಂಗವಾಗಿ ಅಗ್ನಿಶಾಮಕ ಠಾಣೆ ವತಿಯಿಂದ ಅಗ್ನಿ ಸುರಕ್ಷತೆ ಕುರಿತು ಪ್ರಾತ್ಯಕ್ಷಿಕೆ ಹಾಗೂ ಅಣುಕು ಪ್ರದರ್ಶನ ಸೋಮವಾರ ನಡೆಯಿತು. </p>.<p>ಅಗ್ನಿ ಅವಘಡ ಸಂಭವಿಸಿದಾಗ ಅದು ಗಾಳಿಯಲ್ಲಿ ಹರಡದಂತೆ ಮೊದಲು ನಿಯಂತ್ರಿಸಬೇಕು ಎಂದು ಅಗ್ನಿಶಾಮಕ ಠಾಣಾಧಿಕಾರಿ ಟಿ.ಆರ್. ಪರುಶುರಾಮಪ್ಪ ಸಲಹೆ ನೀಡಿದರು.</p>.<p>ಅಡುಗೆ ಅನಿಲ (ಸಿಲಿಂಡರ್) ಹೊತ್ತಿ ಉರಿಯುತ್ತಿರುವಾಗ ಅದನ್ನು ನಿಯಂತ್ರಿಸುವ ಬಗೆಯನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು. </p>.<p>ಸಿಲಿಂಡರ್ನಿಂದ ಬೆಂಕಿಯ ಕೆನ್ನಾಲಿಗೆ ಚಾಚದಂತೆ ಹಸಿಬಟ್ಟೆಯಿಂದ ಸಿಲಿಂಡರ್ ಅನ್ನು ಸುತ್ತಬೇಕು ಇಲ್ಲವೇ ದೊಡ್ಡ ಪಾತ್ರೆ, ಬಕೆಟ್ಗಳನ್ನು ಬಳಸಿ ಸಿಲಿಂಡರ್ ಮುಚ್ಚುವಂತೆ ಮಾಡಬೇಕು ಎಂದು ವಿವರಿಸಿದರು. </p>.<p>ಅಗ್ನಿಶಾಮಕ ಠಾಣೆ ಸಿಬ್ಬಂದಿ ಗದ್ದಿಗೇಶ್, ನಿರಂಜನ್, ವಿನಯ್, ಶ್ರೀನಿವಾಸ್, ಲೋಕೇಶ್ ಹಾಗೂ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ತಾಲ್ಲೂಕಿನ ಸೊರಟೂರು ಗ್ರಾಮದಲ್ಲಿ ಅಗ್ನಿ ಸುರಕ್ಷತಾ ಸಪ್ತಾಹದ ಅಂಗವಾಗಿ ಅಗ್ನಿಶಾಮಕ ಠಾಣೆ ವತಿಯಿಂದ ಅಗ್ನಿ ಸುರಕ್ಷತೆ ಕುರಿತು ಪ್ರಾತ್ಯಕ್ಷಿಕೆ ಹಾಗೂ ಅಣುಕು ಪ್ರದರ್ಶನ ಸೋಮವಾರ ನಡೆಯಿತು. </p>.<p>ಅಗ್ನಿ ಅವಘಡ ಸಂಭವಿಸಿದಾಗ ಅದು ಗಾಳಿಯಲ್ಲಿ ಹರಡದಂತೆ ಮೊದಲು ನಿಯಂತ್ರಿಸಬೇಕು ಎಂದು ಅಗ್ನಿಶಾಮಕ ಠಾಣಾಧಿಕಾರಿ ಟಿ.ಆರ್. ಪರುಶುರಾಮಪ್ಪ ಸಲಹೆ ನೀಡಿದರು.</p>.<p>ಅಡುಗೆ ಅನಿಲ (ಸಿಲಿಂಡರ್) ಹೊತ್ತಿ ಉರಿಯುತ್ತಿರುವಾಗ ಅದನ್ನು ನಿಯಂತ್ರಿಸುವ ಬಗೆಯನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು. </p>.<p>ಸಿಲಿಂಡರ್ನಿಂದ ಬೆಂಕಿಯ ಕೆನ್ನಾಲಿಗೆ ಚಾಚದಂತೆ ಹಸಿಬಟ್ಟೆಯಿಂದ ಸಿಲಿಂಡರ್ ಅನ್ನು ಸುತ್ತಬೇಕು ಇಲ್ಲವೇ ದೊಡ್ಡ ಪಾತ್ರೆ, ಬಕೆಟ್ಗಳನ್ನು ಬಳಸಿ ಸಿಲಿಂಡರ್ ಮುಚ್ಚುವಂತೆ ಮಾಡಬೇಕು ಎಂದು ವಿವರಿಸಿದರು. </p>.<p>ಅಗ್ನಿಶಾಮಕ ಠಾಣೆ ಸಿಬ್ಬಂದಿ ಗದ್ದಿಗೇಶ್, ನಿರಂಜನ್, ವಿನಯ್, ಶ್ರೀನಿವಾಸ್, ಲೋಕೇಶ್ ಹಾಗೂ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>