ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭತ್ತದ ಹುಲ್ಲಿನ ಬಣವೆಗೆ ಬೆಂಕಿ

Last Updated 2 ಜೂನ್ 2019, 15:43 IST
ಅಕ್ಷರ ಗಾತ್ರ

ಮಾಯಕೊಂಡ: ಇಲ್ಲಿನ ನಾಗತಿಹಳ್ಳಿಯಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ತಗುಲಿ 10 ಲೋಡ್ ಭತ್ತದ ಹುಲ್ಲಿನ ಬಣವೆ ಸುಟ್ಟು ಹೋಗಿದೆ.

ಹಾಲಪ್ಪ ಎಂಬುವವರು ತಮ್ಮ ಜಮೀನಿನಲ್ಲಿ 10 ಲೋಡ್‌ ಭತ್ತದ ಹುಲ್ಲಿನ ಬಣವೆ ಹಾಕಿದ್ದರು. ಶನಿವಾರ ರಾತ್ರಿ 9ಗಂಟೆಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಗಾಳಿ ಹೆಚ್ಚು ಇದ್ದ ಕಾರಣ ಬೆಂಕಿ ಜ್ಚಾಲೆ ಹೆಚ್ಚಿತು. ಸ್ಥಳೀಯರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ಆರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

‘ಕಿಡಿಗೇಡಿಗಳು ಮಾಡಿದ ಕೃತ್ಯದಿಂದ ₹ 50 ಸಾವಿರಕ್ಕೂ ಹೆಚ್ಚು ಮೌಲ್ಯದ ಭತ್ತದ ಹುಲ್ಲು ಸುಟ್ಟುಹೋಗಿದೆ. ಈ ಬಗ್ಗೆ ಹದಡಿ ಪೊಲೀಸ್ ಠಾಣೆಗೆ ದೂರು ನೀಡುತ್ತೇವೆ. ದನಕರುಗಳಿಗೆ ಮೇವಿಲ್ಲದಂತಾಗಿದ್ದು, ಜಿಲ್ಲಾಡಳಿತ ಕೂಡಲೇ ನೆರವು ನೀಡಬೇಕು’ ಎಂದು ಹಾಲಪ್ಪ ಅವರ ಮಗ ರವಿ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT