<p>ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಹಳೆ ಖಾಸಗಿ ಬಸ್ ನಿಲ್ದಾಣದ ಎದುರು ಇರುವ ಭಾಗ್ಯ ಫುಟ್ವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದಾಗಿ ಬೆಂಕಿ ಬಿದ್ದಿದ್ದು, ಲಕ್ಷಾಂತರ ಮೌಲ್ಯದ ಪಾದರಕ್ಷೆಗಳು ಸುಟ್ಟು ಭಸ್ಮವಾಗಿವೆ.</p>.<p>ನಾಗರಾಜ್ ಎಂಬುವರಿಗೆ ಸೇರಿದ ಮಳಿಗೆ ಇದಾಗಿದ್ದು, ರಾತ್ರಿ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು. ಅಲ್ಲದೇ ₹50 ಸಾವಿರದಷ್ಟು ಹಣವನ್ನು ತೆಗೆದುಕೊಟ್ಟರು. ಅಂದಾಜು ₹5 ಲಕ್ಷದಿಂದ ₹ 6ಲಕ್ಷ ಮೌಲ್ಯದ ಪಾದರಕ್ಷೆಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.</p>.<p>ಗುರುವಾರಷ್ಟೇ ಹೊಸದಾಗಿ ಪಾದರಕ್ಷೆಗಳನ್ನು ತರಿಸಲಾಗಿತ್ತು. ಶಾರ್ಟ್ ಸರ್ಕೀಟ್ ಆದ್ದರಿಂದ ಮೀಟರ್ ಬೋರ್ಡ್ಗಳೆಲ್ಲಾ ಸುಟ್ಟುಹೋಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.</p>.<p>ಸ್ಥಳಕ್ಕೆ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಪುಟ್ಟಸ್ವಾಮಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ, ಅಗ್ನಿಶಾಮಕ ಠಾಣಾಧಿಕಾರಿ ಅವಿನಾಶ್, ಸಹಾಯಕ ಅಗ್ನಿಶಾಮಕ ಅಧಿಕಾರಿ ಪಕ್ಕೀರಪ್ಪ, ಸಿಬ್ಬಂದಿ ಭೀಮರಾವ್, ಮಹಾಂತೇಶ್, ರಫೀಕ್, ಆಂಜನೇಯ, ನಾಗರಾಜ್, ಚಂದ್ರೇಗೌಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಹಳೆ ಖಾಸಗಿ ಬಸ್ ನಿಲ್ದಾಣದ ಎದುರು ಇರುವ ಭಾಗ್ಯ ಫುಟ್ವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದಾಗಿ ಬೆಂಕಿ ಬಿದ್ದಿದ್ದು, ಲಕ್ಷಾಂತರ ಮೌಲ್ಯದ ಪಾದರಕ್ಷೆಗಳು ಸುಟ್ಟು ಭಸ್ಮವಾಗಿವೆ.</p>.<p>ನಾಗರಾಜ್ ಎಂಬುವರಿಗೆ ಸೇರಿದ ಮಳಿಗೆ ಇದಾಗಿದ್ದು, ರಾತ್ರಿ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು. ಅಲ್ಲದೇ ₹50 ಸಾವಿರದಷ್ಟು ಹಣವನ್ನು ತೆಗೆದುಕೊಟ್ಟರು. ಅಂದಾಜು ₹5 ಲಕ್ಷದಿಂದ ₹ 6ಲಕ್ಷ ಮೌಲ್ಯದ ಪಾದರಕ್ಷೆಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.</p>.<p>ಗುರುವಾರಷ್ಟೇ ಹೊಸದಾಗಿ ಪಾದರಕ್ಷೆಗಳನ್ನು ತರಿಸಲಾಗಿತ್ತು. ಶಾರ್ಟ್ ಸರ್ಕೀಟ್ ಆದ್ದರಿಂದ ಮೀಟರ್ ಬೋರ್ಡ್ಗಳೆಲ್ಲಾ ಸುಟ್ಟುಹೋಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.</p>.<p>ಸ್ಥಳಕ್ಕೆ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಪುಟ್ಟಸ್ವಾಮಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ, ಅಗ್ನಿಶಾಮಕ ಠಾಣಾಧಿಕಾರಿ ಅವಿನಾಶ್, ಸಹಾಯಕ ಅಗ್ನಿಶಾಮಕ ಅಧಿಕಾರಿ ಪಕ್ಕೀರಪ್ಪ, ಸಿಬ್ಬಂದಿ ಭೀಮರಾವ್, ಮಹಾಂತೇಶ್, ರಫೀಕ್, ಆಂಜನೇಯ, ನಾಗರಾಜ್, ಚಂದ್ರೇಗೌಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>