ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾಳಿ| ಸಿಡಿಮದ್ದು ದುರಂತ: ಒಬ್ಬ ಜಲಸಮಾಧಿ

Last Updated 25 ಡಿಸೆಂಬರ್ 2019, 13:15 IST
ಅಕ್ಷರ ಗಾತ್ರ

ಹೊನ್ನಾಳಿ: ತಾಲ್ಲೂಕಿನ ಹೊಳೆಹರಳಹಳ್ಳಿ ಸಮೀಪದ ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯುವ ಸಂದರ್ಭ ಸಿಡಿಮದ್ದು ಸಿಡಿಸುವ ವೇಳೆ ಸಂಭವಿಸಿದ ದುರಂತದಲ್ಲಿ ಒಬ್ಬರು ಭಾನುವಾರ ಜಲಸಮಾಧಿಯಾಗಿದ್ದಾರೆ.

ರಟ್ಟೇಹಳ್ಳಿ ತಾಲ್ಲೂಕು ಚಿಕ್ಕಕಬ್ಬಾರ್ ಗ್ರಾಮದ ದಾದಾಪೀರ್ (40) ಮೃತಪಟ್ಟವರು. ಇವರ ಜೊತೆಯಲ್ಲಿದ್ದ ಮತ್ತೊಬ್ಬರು ಭಯದಿಂದ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಚಿಕ್ಕಕಬ್ಬಾರ್ ಗ್ರಾಮದ ದಾದಾಪೀರ್ ಸ್ನೇಹಿತನೊಂದಿಗೆ ಹೊಳೆಹರಳಹಳ್ಳಿ ಗ್ರಾಮಕ್ಕೆ ಸಮೀಪದ ನರಸಿಂಹಸ್ವಾಮಿ ದೇವಸ್ಥಾನದ ಬಳಿ ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಹೆಚ್ಚಿನ ಪ್ರಮಾಣದಲ್ಲಿ ಮೀನು ಲಭಿಸುತ್ತವೆ ಎಂಬ ದುರಾಸೆಯಿಂದ ನದಿ ನೀರಿನಲ್ಲಿ ಸಿಡಿಮದ್ದು ಸಿಡಿಸಲು ಮುಂದಾಗಿದ್ದಾರೆ. ಈ ವೇಳೆ ಜಲಸಮಾಧಿಯಾಗಿದ್ದಾರೆ.

ಭಾನುವಾರ ಸಂಜೆಯಿಂದ ಹೊನ್ನಾಳಿಯ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ದಾದಾಪೀರ್ ಶವಕ್ಕಾಗಿ ಹುಡುಕಾಟ ನಡೆಸಿದ್ದು, ಸೋಮವಾರ ಸಂಜೆ ಶವ ಪತ್ತೆಯಾಗಿದೆ.

ದಾದಾಪೀರ್‌ಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT