<p><strong>ನ್ಯಾಮತಿ:</strong> ‘ವಿದ್ಯಾರ್ಥಿ ದೆಸೆಯಲ್ಲಿ ಮುಂದಿನ ತಮ್ಮ ಭವಿಷ್ಯದ ಬಗ್ಗೆ ಏನಾದರೂ ಸಾಧನೆ ಮಾಡುವೆ ಎಂಬ ಛಲ ಇರಬೇಕು’ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕಳೆದ ಸಾಲಿನ ವಿವಿಧ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರಸುತ್ತ ದಿನಮಾನಗಳಲ್ಲಿ ಶೈಕ್ಷಣಿಕ ಪ್ರಗತಿಯಲ್ಲಿ ವಿದ್ಯಾರ್ಥಿನಿಯರು ಮುಂದಿದ್ದಾರೆ. ಯುವಕರು ಸಹ ಛಲದಿಂದ ಓದಿ ಹೆಚ್ಚಿನ ಸಾಧನೆ ಮಾಡುವಂತೆ’ ಕಿವಿಮಾತು ಹೇಳಿದರು.</p>.<p>‘ವಿದ್ಯಾರ್ಥಿಗಳು ತಾವು ಕಾನೂನು ಪಾಲನೆ ಮಾಡುವುದರ ಜೊತೆಗೆ ಸಮಾಜದಲ್ಲಿ ಕಾನೂನಿನ ಅರಿವು ಮೂಡಿಸಬೇಕು. ದುಶ್ಚಟಗಳಿಂದ, ಅಪರಾಧ ಕೃತ್ಯಗಳಿಂದ ದೂರವಿರುವಂತೆ’ ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್.ರವಿ ಸಲಹೆ ನೀಡಿದರು.</p>.<p>ಬಸವಾಪಟ್ಟಣ ಜನತಾ ಪ್ರೌಢಶಾಲೆ ಹವ್ಯಾಸಿ ಜನಪದ ಕಲಾವಿದ ಬಿ.ಎಂ.ಜಯಣ್ಣ ಅವರು ಹಲವು ಜನಪದ ಗೀತೆ ಮತ್ತು ಕವನಗಳನ್ನು ಹಾಡುತ್ತ ಕನ್ನಡ ಸಾಹಿತ್ಯದ ಮಹತ್ವವನ್ನು ತಿಳಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲರಾದ ಟಿ.ಸಿ.ಭಾರತಿ ಅಧ್ಯಕ್ಷತೆ ವಹಿಸಿದ್ದರು.</p>.<p>ವಿವಿಧ ಘಟಕಗಳ ಮುಖ್ಯಸ್ಥರಾದ ಎನ್.ಜ್ಯೋತಿ, ಎಂ.ಎಸ್.ಗಿರೀಶ, ಜಿ.ಪಿ.ರಾಘವೇಂದ್ರ, ಎಸ್.ಎಚ್.ಚಂದ್ರಪ್ಪ, ಜಿ.ಆರ್.ರಾಜಶೇಖರ, ಡಿ.ಶಿವಕುಮಾರ ಹಾಗೂ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ:</strong> ‘ವಿದ್ಯಾರ್ಥಿ ದೆಸೆಯಲ್ಲಿ ಮುಂದಿನ ತಮ್ಮ ಭವಿಷ್ಯದ ಬಗ್ಗೆ ಏನಾದರೂ ಸಾಧನೆ ಮಾಡುವೆ ಎಂಬ ಛಲ ಇರಬೇಕು’ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕಳೆದ ಸಾಲಿನ ವಿವಿಧ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರಸುತ್ತ ದಿನಮಾನಗಳಲ್ಲಿ ಶೈಕ್ಷಣಿಕ ಪ್ರಗತಿಯಲ್ಲಿ ವಿದ್ಯಾರ್ಥಿನಿಯರು ಮುಂದಿದ್ದಾರೆ. ಯುವಕರು ಸಹ ಛಲದಿಂದ ಓದಿ ಹೆಚ್ಚಿನ ಸಾಧನೆ ಮಾಡುವಂತೆ’ ಕಿವಿಮಾತು ಹೇಳಿದರು.</p>.<p>‘ವಿದ್ಯಾರ್ಥಿಗಳು ತಾವು ಕಾನೂನು ಪಾಲನೆ ಮಾಡುವುದರ ಜೊತೆಗೆ ಸಮಾಜದಲ್ಲಿ ಕಾನೂನಿನ ಅರಿವು ಮೂಡಿಸಬೇಕು. ದುಶ್ಚಟಗಳಿಂದ, ಅಪರಾಧ ಕೃತ್ಯಗಳಿಂದ ದೂರವಿರುವಂತೆ’ ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್.ರವಿ ಸಲಹೆ ನೀಡಿದರು.</p>.<p>ಬಸವಾಪಟ್ಟಣ ಜನತಾ ಪ್ರೌಢಶಾಲೆ ಹವ್ಯಾಸಿ ಜನಪದ ಕಲಾವಿದ ಬಿ.ಎಂ.ಜಯಣ್ಣ ಅವರು ಹಲವು ಜನಪದ ಗೀತೆ ಮತ್ತು ಕವನಗಳನ್ನು ಹಾಡುತ್ತ ಕನ್ನಡ ಸಾಹಿತ್ಯದ ಮಹತ್ವವನ್ನು ತಿಳಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲರಾದ ಟಿ.ಸಿ.ಭಾರತಿ ಅಧ್ಯಕ್ಷತೆ ವಹಿಸಿದ್ದರು.</p>.<p>ವಿವಿಧ ಘಟಕಗಳ ಮುಖ್ಯಸ್ಥರಾದ ಎನ್.ಜ್ಯೋತಿ, ಎಂ.ಎಸ್.ಗಿರೀಶ, ಜಿ.ಪಿ.ರಾಘವೇಂದ್ರ, ಎಸ್.ಎಚ್.ಚಂದ್ರಪ್ಪ, ಜಿ.ಆರ್.ರಾಜಶೇಖರ, ಡಿ.ಶಿವಕುಮಾರ ಹಾಗೂ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>