ದಾವಣಗೆರೆ: ದಾವಣಗೆರೆ ಗ್ರಾಮಾಂತರ ಠಾಣೆ ಆವರಣದ ವಿಶ್ರಾಂತಿ ಕೊಠಡಿಯಲ್ಲಿ ಜೂಜಾಟವಾಡುತ್ತಿದ್ದ ವೇಳೆ ಸೋಮವಾರ ರಾತ್ರಿ ದಾಳಿ ನಡೆಸಿದ ಐಜಿ ಸ್ಕ್ವಾಡ್ನ ತಂಡಕ್ಕೆ 5 ಜನ ಕಾನ್ಸ್ಟೆಬಲ್ಗಳು ಸಿಕ್ಕಿಬಿದ್ದಿದ್ದು, ಅವರಿಂದ ₹29 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.
ಕಾನ್ಸ್ಟೆಬಲ್ಗಳಾದ ಲೋಹಿತ್, ನಾಗರಾಜ್, ಮಂಜಪ್ಪ, ಮಹೇಶ್, ಬಾಲರಾಜ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪೂರ್ವ ವಲಯ ಐಜಿಪಿ ಆದೇಶದಂತೆ ಡಿವೈಎಸ್ಪಿ ತಿರುಮಲೇಶ್, ಪೊಲೀಸ್ ಇನ್ಸ್ಪೆಕ್ಟರ್ ಶಂಕರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.