<p><strong>ದಾವಣಗೆರೆ: </strong>ಜನಪದ ಪರಂಪರೆಯ ಬಗ್ಗೆ ನೂರಾರು ಸಂಶೋಧನೆಗಳು ನಡೆದಿದ್ದರೂ ಕಲಾವಿದರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಸುಧಾರಣೆಯಾಗಿಲ್ಲ ಎಂದು ಕನ್ನಡ ಜನಪದ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಡಾ.ಎಸ್. ಬಾಲಾಜಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇಲ್ಲಿನ ರಾಮನಗರದ ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ಶುಕ್ರವಾರ ನಡೆದ ಪರಿಷತ್ತಿನ ತಾಲ್ಲೂಕು ಘಟಕ ಏರ್ಪಡಿಸಿದ್ದ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಜನಪದ ಇಂದು ಜಾಗತೀಕರಣದ ಗೊಂದಲಕ್ಕೆ ಈಡಾಗಿದೆ. ಇಂದಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನಪದ ಸೊಗಡು ನಶಿಸಿ ಹೋಗುತ್ತಿದೆ. ದೃಶ್ಯಮಾಧ್ಯಮಗಳಲ್ಲೂ ಜನಪದವನ್ನು ಕಡೆಗಣಿಸುತ್ತಿರುವುದು ದುರಂತ. ಸರ್ಕಾರ ಕಲಾವಿದರಿಗೆ ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.</p>.<p>ಪರಿಷತ್ತಿನಿಂದ ಜನಪದ ಕಲಾವಿದರ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಪ್ರಶಸ್ತಿಗಳಿಂದ ವಂಚಿತರಾದ ಕಲಾವಿದರನ್ನು ಗುರುತಿಸಿ ಪ್ರತಿವರ್ಷ ‘ಜನಪದ ಪ್ರಪಂಚ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷರಾದ ಗೀತಾ ಬಿ. ಮಾಲತೇಶ್, ‘ಸರ್ಕಾರಿ ಶಾಲಾ-ಕಾಲೇಜು, ಮಠಗಳು, ವಸತಿನಿಲಯಗಳಲ್ಲಿ ಜನಪದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜನಪದ ಸಮ್ಮೇಳನ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>ಯುವಜನೋತ್ಸವದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಆನಂದಗೌಡ ಪಾಟೀಲ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪರಮೇಶ್ವರಪ್ಪ ಮಾತನಾಡಿದರು.</p>.<p>ಜನಪದ ಕಲಾವಿದೆ 110 ವರ್ಷದ ಕುಣುಕಿಬಾಯಿ ಅವರನ್ನು ಸನ್ಮಾನಿಸಲಾಯಿತು.</p>.<p>ಬಾಲಮಂದಿರದ ಅಧೀಕ್ಷಕರಾದ ಯಶೋದಮ್ಮ ಎಸ್., ಚಿಕ್ಕಪ್ಪ ಯಾದವ್, ಕೊಟ್ರೇಶ್, ಶ್ರೀಕಾಂತ ಬಗರೆ, ಮೊಹಮ್ಮದ್ ಗೌಸ್, ಸುರೇಶ್ ಕೆ.ಎನ್., ಗಿರಿಧರ್ ಟಿ.ವಿ., ಪೃಥ್ವಿ ಬಿ.ಎಂ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಜನಪದ ಪರಂಪರೆಯ ಬಗ್ಗೆ ನೂರಾರು ಸಂಶೋಧನೆಗಳು ನಡೆದಿದ್ದರೂ ಕಲಾವಿದರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಸುಧಾರಣೆಯಾಗಿಲ್ಲ ಎಂದು ಕನ್ನಡ ಜನಪದ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಡಾ.ಎಸ್. ಬಾಲಾಜಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇಲ್ಲಿನ ರಾಮನಗರದ ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ಶುಕ್ರವಾರ ನಡೆದ ಪರಿಷತ್ತಿನ ತಾಲ್ಲೂಕು ಘಟಕ ಏರ್ಪಡಿಸಿದ್ದ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಜನಪದ ಇಂದು ಜಾಗತೀಕರಣದ ಗೊಂದಲಕ್ಕೆ ಈಡಾಗಿದೆ. ಇಂದಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನಪದ ಸೊಗಡು ನಶಿಸಿ ಹೋಗುತ್ತಿದೆ. ದೃಶ್ಯಮಾಧ್ಯಮಗಳಲ್ಲೂ ಜನಪದವನ್ನು ಕಡೆಗಣಿಸುತ್ತಿರುವುದು ದುರಂತ. ಸರ್ಕಾರ ಕಲಾವಿದರಿಗೆ ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.</p>.<p>ಪರಿಷತ್ತಿನಿಂದ ಜನಪದ ಕಲಾವಿದರ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಪ್ರಶಸ್ತಿಗಳಿಂದ ವಂಚಿತರಾದ ಕಲಾವಿದರನ್ನು ಗುರುತಿಸಿ ಪ್ರತಿವರ್ಷ ‘ಜನಪದ ಪ್ರಪಂಚ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷರಾದ ಗೀತಾ ಬಿ. ಮಾಲತೇಶ್, ‘ಸರ್ಕಾರಿ ಶಾಲಾ-ಕಾಲೇಜು, ಮಠಗಳು, ವಸತಿನಿಲಯಗಳಲ್ಲಿ ಜನಪದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜನಪದ ಸಮ್ಮೇಳನ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>ಯುವಜನೋತ್ಸವದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಆನಂದಗೌಡ ಪಾಟೀಲ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪರಮೇಶ್ವರಪ್ಪ ಮಾತನಾಡಿದರು.</p>.<p>ಜನಪದ ಕಲಾವಿದೆ 110 ವರ್ಷದ ಕುಣುಕಿಬಾಯಿ ಅವರನ್ನು ಸನ್ಮಾನಿಸಲಾಯಿತು.</p>.<p>ಬಾಲಮಂದಿರದ ಅಧೀಕ್ಷಕರಾದ ಯಶೋದಮ್ಮ ಎಸ್., ಚಿಕ್ಕಪ್ಪ ಯಾದವ್, ಕೊಟ್ರೇಶ್, ಶ್ರೀಕಾಂತ ಬಗರೆ, ಮೊಹಮ್ಮದ್ ಗೌಸ್, ಸುರೇಶ್ ಕೆ.ಎನ್., ಗಿರಿಧರ್ ಟಿ.ವಿ., ಪೃಥ್ವಿ ಬಿ.ಎಂ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>