<p><strong>ದಾವಣಗೆರೆ</strong>: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ₹ 4.5 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ರಾಜಸ್ಥಾನ ಮೂಲದ, ಬೆಂಗಳೂರಿನಲ್ಲಿ ನೆಲೆಸಿರುವ ಅಶೋಕ್ ಕುಮಾರ ಬಂಧಿತ ಆರೋಪಿ. ನಗರದ ಕೆ.ಆರ್.ರಸ್ತೆಯ ಎಲ್.ಐ.ಸಿ ಕಚೇರಿ ಹಿಂಭಾಗದ ಬಿ.ಟಿ. ಲೇಔಟ್ನ ಉದ್ಯಾನದ ಮುಂಭಾಗದಲ್ಲಿ ಆರೋಪಿಯು ಮಾದಕ ವಸ್ತುಗಳನ್ನು ಮಾರುತ್ತಿದ್ದ.</p>.<p>ಆಫೀಮ್ ಮೊಗ್ಗಿನ ಒಣಗಿದ ಪೌಡರ್ (35 ಗ್ರಾಂ), ಎಂಡಿಎಂಎ ಕ್ಟಿಸ್ಟಲ್ (8 ಗ್ರಾಂ –ಗೋಧಿ ಬಣ್ಣದಂತಿರುವ) (15 ಗ್ರಾಂ –ಬಿಳಿ ಬಣ್ಣದ್ದು), ಒಪಿಯಂ ಪೇಸ್ಟ್ (7 ಗ್ರಾಂ) ಮಾದಕ ವಸ್ತುಗಳನ್ನು ಆರೋಪಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಆಜಾದ್ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಶ್ವಿನ್ ಕುಮಾರ್ ನೇತೃತ್ವದಲ್ಲಿ ಡಿಸಿಆರ್ಬಿ ಘಟಕದ ಸಿಬ್ಬಂದಿಯಾದ ಮಜೀದ್, ರಮೇಶ್ ನಾಯ್ಕ, ಕೆ.ಟಿ.ಆಂಜನೇಯ, ಬಾಲರಾಜ್, ಮಾಲತೇಶ್ ಕೆಳಗಿನಮನೆ, ಕೃಷ್ಣ ನಂದ್ಯಾಲ, ತಿಪ್ಪೇಸ್ವಾಮಿ, ನಾಗರಾಜ ಡಿ.ಬಿ. ಕಾರ್ಯಾಚರಣೆ ನಡೆಸಿದ್ದರು.</p>.<p>ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ₹ 4.5 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ರಾಜಸ್ಥಾನ ಮೂಲದ, ಬೆಂಗಳೂರಿನಲ್ಲಿ ನೆಲೆಸಿರುವ ಅಶೋಕ್ ಕುಮಾರ ಬಂಧಿತ ಆರೋಪಿ. ನಗರದ ಕೆ.ಆರ್.ರಸ್ತೆಯ ಎಲ್.ಐ.ಸಿ ಕಚೇರಿ ಹಿಂಭಾಗದ ಬಿ.ಟಿ. ಲೇಔಟ್ನ ಉದ್ಯಾನದ ಮುಂಭಾಗದಲ್ಲಿ ಆರೋಪಿಯು ಮಾದಕ ವಸ್ತುಗಳನ್ನು ಮಾರುತ್ತಿದ್ದ.</p>.<p>ಆಫೀಮ್ ಮೊಗ್ಗಿನ ಒಣಗಿದ ಪೌಡರ್ (35 ಗ್ರಾಂ), ಎಂಡಿಎಂಎ ಕ್ಟಿಸ್ಟಲ್ (8 ಗ್ರಾಂ –ಗೋಧಿ ಬಣ್ಣದಂತಿರುವ) (15 ಗ್ರಾಂ –ಬಿಳಿ ಬಣ್ಣದ್ದು), ಒಪಿಯಂ ಪೇಸ್ಟ್ (7 ಗ್ರಾಂ) ಮಾದಕ ವಸ್ತುಗಳನ್ನು ಆರೋಪಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಆಜಾದ್ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಶ್ವಿನ್ ಕುಮಾರ್ ನೇತೃತ್ವದಲ್ಲಿ ಡಿಸಿಆರ್ಬಿ ಘಟಕದ ಸಿಬ್ಬಂದಿಯಾದ ಮಜೀದ್, ರಮೇಶ್ ನಾಯ್ಕ, ಕೆ.ಟಿ.ಆಂಜನೇಯ, ಬಾಲರಾಜ್, ಮಾಲತೇಶ್ ಕೆಳಗಿನಮನೆ, ಕೃಷ್ಣ ನಂದ್ಯಾಲ, ತಿಪ್ಪೇಸ್ವಾಮಿ, ನಾಗರಾಜ ಡಿ.ಬಿ. ಕಾರ್ಯಾಚರಣೆ ನಡೆಸಿದ್ದರು.</p>.<p>ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>