<p><strong>ದಾವಣಗೆರೆ:</strong> ನಗರದ ಕಲ್ಯಾಣ ಮಂಟಪವೊಂದರಲ್ಲಿ ಕೂಲಿ ಕಾರ್ಮಿಕರೊಬ್ಬರನ್ನು ಒಳಚರಂಡಿ ಸ್ವಚ್ಛತೆಗೆ ಚರಂಡಿಗೆ ಇಳಿಸಿದ ಪ್ರಕರಣ ಸಂಬಂಧ ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಕೂಲಿ ಕಾರ್ಮಿಕ ಸಿದ್ದೇಶ ಅವರನ್ನು ಒಳಚರಂಡಿಗೆ ಇಳಿಸಿದ ಸಂಬಂಧ ಪರಿಶೀಲನೆ ನಡೆಸಿದ್ದು, ಕೃತ್ಯ ಸಾಬೀತಾದ ಕಾರಣ ಕಲ್ಯಾಣ ಮಂಟಪದ ಮಾಲೀಕರು, ಮೇಲ್ವಿಚಾರಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಸಹಾಯಕ ಎಂಜಿನಿಯರ್ (ಯುಜಿಡಿ) ಪಿ.ಮಧುಸೂಧನ್ ಬಡಾವಣೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಒಳಚರಂಡಿ ವ್ಯವಸ್ಥೆಯ ದುರವಸ್ಥೆ ಬಗ್ಗೆ ಪಾಲಿಕೆಗೆ ದೂರು ಸಲ್ಲಿಸದೆ ಕಾರ್ಮಿಕನಿಂದ ಸ್ವಚ್ಛ ಮಾಡಿಸಲಾಗಿದೆ. ಈ ಸಂಬಂಧ ಮಾಲೀಕರು, ಮೇಲ್ವಿಚಾರಕರು ಹಾಗೂ ಇತರರ ವಿರುದ್ಧ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ– 2013 ಕಾಯ್ದೆ ಹಾಗೂ ಸೆಕ್ಷನ್– 20ರ ಅಡಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.</p>.<p>‘ಕಿರಿಯ ಆರೋಗ್ಯ ನಿರೀಕ್ಷಕ ನಿಖಿಲ್ ಅವರೊಂದಿಗೆ ಕಲ್ಯಾಣ ಮಂಟಕ್ಕೆ ಭೇಟಿ ನೀಡಿದಾಗ ಒಳಚರಂಡಿ ಛೇಂಬರ್ ತೆರೆದಿತ್ತು. ಮೇಲ್ವಿಚಾರಕ ಮುಪ್ಪಯ್ಯ ಅವರು ಕಾರ್ಮಿಕ ಸಿದ್ದೇಶ ಅವರಿಂದ ಒಳಚರಂಡಿ ಸ್ವಚ್ಛಗೊಳಿಸಿರುವುದನ್ನು ಒಪ್ಪಿಕೊಂಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ನಗರದ ಕಲ್ಯಾಣ ಮಂಟಪವೊಂದರಲ್ಲಿ ಕೂಲಿ ಕಾರ್ಮಿಕರೊಬ್ಬರನ್ನು ಒಳಚರಂಡಿ ಸ್ವಚ್ಛತೆಗೆ ಚರಂಡಿಗೆ ಇಳಿಸಿದ ಪ್ರಕರಣ ಸಂಬಂಧ ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಕೂಲಿ ಕಾರ್ಮಿಕ ಸಿದ್ದೇಶ ಅವರನ್ನು ಒಳಚರಂಡಿಗೆ ಇಳಿಸಿದ ಸಂಬಂಧ ಪರಿಶೀಲನೆ ನಡೆಸಿದ್ದು, ಕೃತ್ಯ ಸಾಬೀತಾದ ಕಾರಣ ಕಲ್ಯಾಣ ಮಂಟಪದ ಮಾಲೀಕರು, ಮೇಲ್ವಿಚಾರಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಸಹಾಯಕ ಎಂಜಿನಿಯರ್ (ಯುಜಿಡಿ) ಪಿ.ಮಧುಸೂಧನ್ ಬಡಾವಣೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಒಳಚರಂಡಿ ವ್ಯವಸ್ಥೆಯ ದುರವಸ್ಥೆ ಬಗ್ಗೆ ಪಾಲಿಕೆಗೆ ದೂರು ಸಲ್ಲಿಸದೆ ಕಾರ್ಮಿಕನಿಂದ ಸ್ವಚ್ಛ ಮಾಡಿಸಲಾಗಿದೆ. ಈ ಸಂಬಂಧ ಮಾಲೀಕರು, ಮೇಲ್ವಿಚಾರಕರು ಹಾಗೂ ಇತರರ ವಿರುದ್ಧ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ– 2013 ಕಾಯ್ದೆ ಹಾಗೂ ಸೆಕ್ಷನ್– 20ರ ಅಡಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.</p>.<p>‘ಕಿರಿಯ ಆರೋಗ್ಯ ನಿರೀಕ್ಷಕ ನಿಖಿಲ್ ಅವರೊಂದಿಗೆ ಕಲ್ಯಾಣ ಮಂಟಕ್ಕೆ ಭೇಟಿ ನೀಡಿದಾಗ ಒಳಚರಂಡಿ ಛೇಂಬರ್ ತೆರೆದಿತ್ತು. ಮೇಲ್ವಿಚಾರಕ ಮುಪ್ಪಯ್ಯ ಅವರು ಕಾರ್ಮಿಕ ಸಿದ್ದೇಶ ಅವರಿಂದ ಒಳಚರಂಡಿ ಸ್ವಚ್ಛಗೊಳಿಸಿರುವುದನ್ನು ಒಪ್ಪಿಕೊಂಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>