<p><strong>ದಾವಣಗೆರೆ</strong>: ಡಾ.ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ರಾಜ್ಯ ರೈತ ಸಂಘದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. </p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗಾರಿಕಾ ವಲಯಕ್ಕೆ ನೀಡಿದ ಪ್ರೋತ್ಸಾಹವನ್ನು ರೈತ ವಲಯಕ್ಕೂ ನೀಡುವ ಮೂಲಕ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂಬುದು ಎಂ.ಎಸ್.ರಾಮನಾಥನ್ ವರದಿಯ ಆಶಯವಾಗಿದೆ ಎಂದು ತಿಳಿಸಲಾಗಿದೆ. </p>.<p>‘ಸ್ವಾಮಿನಾಥನ್ ಅವರು ಹಸಿರು ಕ್ರಾಂತಿಯ ಬಗ್ಗೆ ಅಧ್ಯಯನ ನಡೆಸಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ, ಈ ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಈಗಿನ ಬಿಜೆಪಿ ಸರ್ಕಾರಗಳು ವರದಿಯನ್ನು ಜಾರಿಗೆ ತರುತ್ತೇವೆ ಎಂದು ರೈತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಾ ಬಂದಿವೆ’ ಎಂದು ರಾಜ್ಯ ರೈತ ಸಂಘದ ಮುಖಂಡರು ದೂರಿದ್ದಾರೆ. </p>.<p>‘ಇದೇ ರೀತಿ ಮುಂದುವರಿದರೆ ದೇಶದ 140 ಕೋಟಿ ಜನರಿಗೆ ಆಹಾರದ ಕೊರತೆ ಉಂಟಾಗಬಹುದು. ಸ್ವಾಮಿನಾಥನ್ ವರದಿಯನ್ನು ಜಾರಿ ಮಾಡಿದರೆ, ಆಹಾರ ಭದ್ರತೆಯೊಂದಿಗೆ, ರೈತ ಕುಟುಂಬಗಳ ಭದ್ರತೆಗೂ ಸಹಕರಿಸಿದಂತಾಗುತ್ತದೆ’ ಎಂದು ಹೇಳಿದ್ದಾರೆ. </p>.<p>ಸಂಘದ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ರಾಂಪುರದ ಬಸವರಾಜ, ಕಾರ್ಯಾಧ್ಯಕ್ಷ ಮಾಯಕೊಂಡದ ಅಶೋಕ, ಸಂಘಟನಾ ಕಾರ್ಯದರ್ಶಿ ಮೀಯಾಪುರದ ತಿರುಮಲೇಶ್, ಮುಖಂಡರಾದ ಪ್ರತಾಪ್, ಎನ್.ಜಯನಾಯ್ಕ, ಚಂದ್ರಶೇಖರ್ ಬಾಡ, ಸಂತೋಷಕುಮಾರ್, ಕೆ.ಜಿ.ಹನುಮಂತಪ್ಪ, ಲಿಂಗರಾಜ, ಗೋವಿಂದಪ್ಪ, ಚಂದ್ರಪ್ಪ ಪತ್ರಕ್ಕೆ ಸಹಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಡಾ.ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ರಾಜ್ಯ ರೈತ ಸಂಘದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. </p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗಾರಿಕಾ ವಲಯಕ್ಕೆ ನೀಡಿದ ಪ್ರೋತ್ಸಾಹವನ್ನು ರೈತ ವಲಯಕ್ಕೂ ನೀಡುವ ಮೂಲಕ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂಬುದು ಎಂ.ಎಸ್.ರಾಮನಾಥನ್ ವರದಿಯ ಆಶಯವಾಗಿದೆ ಎಂದು ತಿಳಿಸಲಾಗಿದೆ. </p>.<p>‘ಸ್ವಾಮಿನಾಥನ್ ಅವರು ಹಸಿರು ಕ್ರಾಂತಿಯ ಬಗ್ಗೆ ಅಧ್ಯಯನ ನಡೆಸಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ, ಈ ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಈಗಿನ ಬಿಜೆಪಿ ಸರ್ಕಾರಗಳು ವರದಿಯನ್ನು ಜಾರಿಗೆ ತರುತ್ತೇವೆ ಎಂದು ರೈತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಾ ಬಂದಿವೆ’ ಎಂದು ರಾಜ್ಯ ರೈತ ಸಂಘದ ಮುಖಂಡರು ದೂರಿದ್ದಾರೆ. </p>.<p>‘ಇದೇ ರೀತಿ ಮುಂದುವರಿದರೆ ದೇಶದ 140 ಕೋಟಿ ಜನರಿಗೆ ಆಹಾರದ ಕೊರತೆ ಉಂಟಾಗಬಹುದು. ಸ್ವಾಮಿನಾಥನ್ ವರದಿಯನ್ನು ಜಾರಿ ಮಾಡಿದರೆ, ಆಹಾರ ಭದ್ರತೆಯೊಂದಿಗೆ, ರೈತ ಕುಟುಂಬಗಳ ಭದ್ರತೆಗೂ ಸಹಕರಿಸಿದಂತಾಗುತ್ತದೆ’ ಎಂದು ಹೇಳಿದ್ದಾರೆ. </p>.<p>ಸಂಘದ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ರಾಂಪುರದ ಬಸವರಾಜ, ಕಾರ್ಯಾಧ್ಯಕ್ಷ ಮಾಯಕೊಂಡದ ಅಶೋಕ, ಸಂಘಟನಾ ಕಾರ್ಯದರ್ಶಿ ಮೀಯಾಪುರದ ತಿರುಮಲೇಶ್, ಮುಖಂಡರಾದ ಪ್ರತಾಪ್, ಎನ್.ಜಯನಾಯ್ಕ, ಚಂದ್ರಶೇಖರ್ ಬಾಡ, ಸಂತೋಷಕುಮಾರ್, ಕೆ.ಜಿ.ಹನುಮಂತಪ್ಪ, ಲಿಂಗರಾಜ, ಗೋವಿಂದಪ್ಪ, ಚಂದ್ರಪ್ಪ ಪತ್ರಕ್ಕೆ ಸಹಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>