<p>ಜಗಳೂರು: ಮಾಜಿ ಶಾಸಕ ಎಚ್.ಪಿ.ರಾಜೇಶ್ ತಮ್ಮ ಬೆಂಬಲಿಗರೊಂದಿಗೆ ಗುರುವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.</p>.<p>‘ರಾಜ್ಯದಲ್ಲಿ ಬಿಜೆಪಿ ಗಾಳಿ ಬೀಸುತ್ತಿದ್ದು, ಅನ್ಯಪಕ್ಷಗಳ ಮುಖಂಡರು ಬಿಜೆಪಿ ಸೇರಲು ಬರುತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಆಯ್ಕೆಯಾಗುವುದು ನಿಶ್ಚಿತ’ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.</p>.<p>‘ನಾನು ಮೂಲತಃ ಬಿಜೆಪಿಯಿಂದಲೇ ರಾಜಕೀಯ ಪ್ರವೇಶ ಮಾಡಿದ್ದು, ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಶಾಸಕನಾಗಿ ಆಯ್ಕೆಯಾದೆ. ಆದರೆ, ಕಳೆದ ಬಾರಿ ನಾನು ಗೆಲ್ಲುವ ಲಕ್ಷಣಗಳಿದ್ದರೂ ಆ ಪಕ್ಷದ ಮುಖಂಡರು ಟಿಕೆಟ್ ಕೊಡದೆ ವಂಚಿಸಿದರು. ಆದಾಗ್ಯೂ ಕೆಲವೇ ಮತಗಳಿಂದ ಸೋಲು ಅನುಭವಿಸಿದೆ. ಬೆಂಬಲಿಗರ ಅಭಿಪ್ರಾಯದಂತೆ ಬಿಜೆಪಿಗೆ ಮರಳಿ ಬಂದಿದ್ದೇನೆ’ ಎಂದು ಎಚ್.ಪಿ.ರಾಜೇಶ್ ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವ ಸಿ.ಟಿ.ರವಿ, ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹಾಜರಿದ್ದರು.</p>.<p>ರಾಜೇಶ್ ಅವರ ರಾಜಕೀಯ ಎದುರಾಳಿಯಾಗಿದ್ದ ಎಸ್.ವಿ.ರಾಮಚಂದ್ರ ಅವರು ಹೂಗುಚ್ಛ ನೀಡಿ ರಾಜೇಶ್ ಅವರನ್ನು ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಗಳೂರು: ಮಾಜಿ ಶಾಸಕ ಎಚ್.ಪಿ.ರಾಜೇಶ್ ತಮ್ಮ ಬೆಂಬಲಿಗರೊಂದಿಗೆ ಗುರುವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.</p>.<p>‘ರಾಜ್ಯದಲ್ಲಿ ಬಿಜೆಪಿ ಗಾಳಿ ಬೀಸುತ್ತಿದ್ದು, ಅನ್ಯಪಕ್ಷಗಳ ಮುಖಂಡರು ಬಿಜೆಪಿ ಸೇರಲು ಬರುತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಆಯ್ಕೆಯಾಗುವುದು ನಿಶ್ಚಿತ’ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.</p>.<p>‘ನಾನು ಮೂಲತಃ ಬಿಜೆಪಿಯಿಂದಲೇ ರಾಜಕೀಯ ಪ್ರವೇಶ ಮಾಡಿದ್ದು, ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಶಾಸಕನಾಗಿ ಆಯ್ಕೆಯಾದೆ. ಆದರೆ, ಕಳೆದ ಬಾರಿ ನಾನು ಗೆಲ್ಲುವ ಲಕ್ಷಣಗಳಿದ್ದರೂ ಆ ಪಕ್ಷದ ಮುಖಂಡರು ಟಿಕೆಟ್ ಕೊಡದೆ ವಂಚಿಸಿದರು. ಆದಾಗ್ಯೂ ಕೆಲವೇ ಮತಗಳಿಂದ ಸೋಲು ಅನುಭವಿಸಿದೆ. ಬೆಂಬಲಿಗರ ಅಭಿಪ್ರಾಯದಂತೆ ಬಿಜೆಪಿಗೆ ಮರಳಿ ಬಂದಿದ್ದೇನೆ’ ಎಂದು ಎಚ್.ಪಿ.ರಾಜೇಶ್ ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವ ಸಿ.ಟಿ.ರವಿ, ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹಾಜರಿದ್ದರು.</p>.<p>ರಾಜೇಶ್ ಅವರ ರಾಜಕೀಯ ಎದುರಾಳಿಯಾಗಿದ್ದ ಎಸ್.ವಿ.ರಾಮಚಂದ್ರ ಅವರು ಹೂಗುಚ್ಛ ನೀಡಿ ರಾಜೇಶ್ ಅವರನ್ನು ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>