ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಪಿಡಿಒ: ದೂರು

Last Updated 29 ಜೂನ್ 2020, 15:34 IST
ಅಕ್ಷರ ಗಾತ್ರ

ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ ಪಿಡಿಒ ಬಳಿಕ ಕೈಕೊಟ್ಟಿದ್ದಾನೆ ಎಂದು ನೊಂದ ಯುವತಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ಶಾಮನೂರಿನ ವಿಭಿನ್ನ ಜಾತಿಯ ಈ ಜೋಡಿಯಲ್ಲಿ ಹುಡುಗಿ ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಯುವಕ ಪರಮೇಶ್ವರಪ್ಪನಿಗೆ ಅನುಕಂಪದ ಆಧಾರದಲ್ಲಿ ಪಿಡಿಒ ಉದ್ಯೋಗ ಸಿಕ್ಕಿತ್ತು. ಉದ್ಯೋಗ ಸಿಕ್ಕಿದ ಮೇಲೆ ಕೈಕೊಟ್ಟಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಆರೋಪಿ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಮಹಿಳಾ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಡಿವೈಎಸ್‌ಪಿ ನಾಗೇಶ್‌ ಐತಾಳ್‌ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT