ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸ ಕೊಡಿಸುವುದಾಗಿ ವಂಚನೆ: ದೂರು

Last Updated 17 ಡಿಸೆಂಬರ್ 2019, 10:35 IST
ಅಕ್ಷರ ಗಾತ್ರ

ದಾವಣಗೆರೆ: ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಿದ ಆರೋಪಿಗಳ ಮೇಲೆ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರತ್‌ ಕಾಲೊನಿ 11ನೇ ಕ್ರಾಸ್‌ ನಿವಾಸಿ ಆರ್‌. ಶಂಕರಪ್ಪ ಹಾಗೂ ಚಿತ್ರದುರ್ಗದ ರವಿಕುಮಾರ ನಾಯ್ಕ್‌ ವಂಚನೆ ಮಾಡಿದ ಆರೋಪಿಗಳು. ನ್ಯಾಯಾಲಯದಲ್ಲಿ ಜವಾನ ಹುದ್ದೆ ಕೊಡಿಸುವುದಾಗಿ ₹ 3 ಲಕ್ಷ ಆರೋಪಿಗಳು ಪಡೆದಿದ್ದಾರೆ. ಈಗ ಉದ್ಯೋಗವನ್ನೂ ಕೊಡಿಸದೇ, ಹಣವನ್ನೂ ವಾಪಸ್‌ ಮಾಡದೇ ತಪ್ಪಿಸಿಕೊಂಡಿದ್ದಾರೆ. ಇದೇ ರೀತಿ ಏಳುಮಲೈ, ಸುಹಾಸಿನಿ, ಭಾರತ್‌ ಕಾಲೊನಿಯ ಇತರರಿಂದಲೂ ಹಣ ಪಡೆದಿದ್ದಾರೆ ಎಂದು ಭಾರತ್‌ ಕಾಲೊನಿಯ ತುಳಸಿಮಣಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT