<p><strong>ದಾವಣಗೆರೆ:</strong> ‘ಪ್ರತಿಭೆ, ಜ್ಞಾನ ಉಚಿತವಾಗಿ ಸಿಗುವುದಿಲ್ಲ. ಅದನ್ನು ಪರಿಶ್ರಮಪಟ್ಟು ಪಡೆಯಬೇಕು. ನಮಗೆ ಬೇಕಾದುದನ್ನು ನಮ್ಮ ಜಾಗದಲ್ಲೇ ಹುಡುಕಿಕೊಳ್ಳಬೇಕು’ ಎಂದುಬಾಪೂಜಿ ವಿದ್ಯಾಸಂಸ್ಥೆ ಶೈಕ್ಷಣಿಕ ನಿರ್ದೇಶಕ ಡಾ.ಎಂ.ಜಿ. ಈಶ್ವರಪ್ಪಕಿವಿಮಾತು ಹೇಳಿದರು.</p>.<p>ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಡಿಆರ್ಎಂ ವಿಜ್ಞಾನ ಪದವಿ ಪೂರ್ವ ಕಾಲೇಜಿನಿಂದ ಶುಕ್ರವಾರ ಹಮ್ಮಿಕೊಂಡಿದ್ದ 2018–19ನೇ ಸಾಲಿನ ಪ್ರತಿಭಾ ಪುರಸ್ಕಾರ, 2019–20ನೇ ಸಾಲಿನ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳಿಗೆ ಗುರಿ ಇರಬೇಕು. ಅದನ್ನು ಸಾಧಿಸಲು ಇರುವ ಅವಕಾಶವನ್ನು ಬಳಸಿಕೊಳ್ಳಬೇಕು. ಜೀವನದಲ್ಲಿ ಶಿಸ್ತು, ಶ್ರದ್ಧೆ, ಶ್ರಮ ಇದ್ದರೆ ಸಾಧನೆ ಸಾಧ್ಯ.ಇಂದು ಬೆರಳ ತುದಿಯಲ್ಲಿ ಪ್ರಪಂಚ ಕಾಣಬಹುದು. ತಂತ್ರಜ್ಞಾನವನ್ನು ಅಗತ್ಯಕ್ಕೆ ತಕ್ಕಂತೆ ಬಳಸಿ. ಸವಾಲುಗಳನ್ನು ಎದುರಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಹೇಳಿದರು.</p>.<p>ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ನಿರಂಜನ್ ಬಿ.ಸಿ., ‘ವಿದ್ಯಾರ್ಥಿಗಳು ಪೋಷಕರ ಒತ್ತಾಯಕ್ಕೆ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬೇಡಿ. ನಿಮಗೆ ಆಸಕ್ತಿ ಇರುವ ಕೋರ್ಸ್ ಆಯ್ಕೆ ಮಾಡಿಕೊಂಡು ಯಶಸ್ಸು ಸಾಧಿಸಿ‘ ಎಂದು ಹೇಳಿದರು.</p>.<p>ಮುಂದೆ ನೀಟ್, ಜೆಇಇ ಸೇರಿ ವಿಪುಲ ಅವಕಾಶಗಳಿವೆ. ಅದನ್ನು ಬಳಸಿಕೊಳ್ಳಿ. ಕೆಸಿಇಟಿ ಪ್ರವೇಶ ಪರೀಕ್ಷೆಗೆ ಬೇಕಾದ ಮಾರ್ಗದರ್ಶನವನ್ನು ಶಿಕ್ಷಕರಿಂದ ಪಡೆಯಿರಿ.ಯಾವುದೇ ಕೋರ್ಸ್ ಆಯ್ಕೆ ಮಾಡಿಕೊಂಡರೂ ಆಸಕ್ತಿ ಇರಲಿ ಎಂದು ಸಲಹೆ ನೀಡಿದರು.</p>.<p>ಬಿಐಇಟಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್. ಚಿದಾನಂದಪ್ಪ, ‘ಇಂದು ಯುವಜನರಲ್ಲಿ ಯಾವುದೇ ವಿಷಯಗಳಿಗೆ ಸ್ಪಂದಿಸುವ ಮನೋಭಾವ ಇಲ್ಲ. ಇದು ಸರಿಯಲ್ಲ. ಸಮಾಜದ ನೋವು, ನಲಿವುಗಳಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಲ್ಲೂ ಸಾಮರ್ಥ್ಯ ಇದೆ. ಅವರಲ್ಲಿ ಆತ್ಮವಿಶ್ವಾಸ ತುಂಬಿ ಸಾಧನೆಗೆ ಉಪನ್ಯಾಸಕರು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.</p>.<p>ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ವಿವಿಧ ವಿಷಯಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ಕಾಲೇಜಿನ ಪ್ರಾಚಾರ್ಯ ಡಾ. ಗೋಪಾಲಕೃಷ್ಣ ನಾಯ್ಕ್ ಎಸ್.ಆರ್. ಅಧ್ಯಕ್ಷತೆ ವಹಿಸಿದ್ದರು. ಪದವಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಬಿ.ಎಸ್. ನಾಗರತ್ನಮ್ಮ, ಉಪನ್ಯಾಸಕರಾದ ಶೋಭಾ ಟಿ., ಕೊಟ್ರಪ್ಪ ಕೆ. ಇದ್ದರು.</p>.<p>ನಯನ ಸ್ವಾಗತಿಸಿದರು. ಅನುಷಾ ವಂದಿಸಿದರು. ಸಂಗೀತಾ, ಯಶಸ್ವಿನಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಪ್ರತಿಭೆ, ಜ್ಞಾನ ಉಚಿತವಾಗಿ ಸಿಗುವುದಿಲ್ಲ. ಅದನ್ನು ಪರಿಶ್ರಮಪಟ್ಟು ಪಡೆಯಬೇಕು. ನಮಗೆ ಬೇಕಾದುದನ್ನು ನಮ್ಮ ಜಾಗದಲ್ಲೇ ಹುಡುಕಿಕೊಳ್ಳಬೇಕು’ ಎಂದುಬಾಪೂಜಿ ವಿದ್ಯಾಸಂಸ್ಥೆ ಶೈಕ್ಷಣಿಕ ನಿರ್ದೇಶಕ ಡಾ.ಎಂ.ಜಿ. ಈಶ್ವರಪ್ಪಕಿವಿಮಾತು ಹೇಳಿದರು.</p>.<p>ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಡಿಆರ್ಎಂ ವಿಜ್ಞಾನ ಪದವಿ ಪೂರ್ವ ಕಾಲೇಜಿನಿಂದ ಶುಕ್ರವಾರ ಹಮ್ಮಿಕೊಂಡಿದ್ದ 2018–19ನೇ ಸಾಲಿನ ಪ್ರತಿಭಾ ಪುರಸ್ಕಾರ, 2019–20ನೇ ಸಾಲಿನ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳಿಗೆ ಗುರಿ ಇರಬೇಕು. ಅದನ್ನು ಸಾಧಿಸಲು ಇರುವ ಅವಕಾಶವನ್ನು ಬಳಸಿಕೊಳ್ಳಬೇಕು. ಜೀವನದಲ್ಲಿ ಶಿಸ್ತು, ಶ್ರದ್ಧೆ, ಶ್ರಮ ಇದ್ದರೆ ಸಾಧನೆ ಸಾಧ್ಯ.ಇಂದು ಬೆರಳ ತುದಿಯಲ್ಲಿ ಪ್ರಪಂಚ ಕಾಣಬಹುದು. ತಂತ್ರಜ್ಞಾನವನ್ನು ಅಗತ್ಯಕ್ಕೆ ತಕ್ಕಂತೆ ಬಳಸಿ. ಸವಾಲುಗಳನ್ನು ಎದುರಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಹೇಳಿದರು.</p>.<p>ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ನಿರಂಜನ್ ಬಿ.ಸಿ., ‘ವಿದ್ಯಾರ್ಥಿಗಳು ಪೋಷಕರ ಒತ್ತಾಯಕ್ಕೆ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬೇಡಿ. ನಿಮಗೆ ಆಸಕ್ತಿ ಇರುವ ಕೋರ್ಸ್ ಆಯ್ಕೆ ಮಾಡಿಕೊಂಡು ಯಶಸ್ಸು ಸಾಧಿಸಿ‘ ಎಂದು ಹೇಳಿದರು.</p>.<p>ಮುಂದೆ ನೀಟ್, ಜೆಇಇ ಸೇರಿ ವಿಪುಲ ಅವಕಾಶಗಳಿವೆ. ಅದನ್ನು ಬಳಸಿಕೊಳ್ಳಿ. ಕೆಸಿಇಟಿ ಪ್ರವೇಶ ಪರೀಕ್ಷೆಗೆ ಬೇಕಾದ ಮಾರ್ಗದರ್ಶನವನ್ನು ಶಿಕ್ಷಕರಿಂದ ಪಡೆಯಿರಿ.ಯಾವುದೇ ಕೋರ್ಸ್ ಆಯ್ಕೆ ಮಾಡಿಕೊಂಡರೂ ಆಸಕ್ತಿ ಇರಲಿ ಎಂದು ಸಲಹೆ ನೀಡಿದರು.</p>.<p>ಬಿಐಇಟಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್. ಚಿದಾನಂದಪ್ಪ, ‘ಇಂದು ಯುವಜನರಲ್ಲಿ ಯಾವುದೇ ವಿಷಯಗಳಿಗೆ ಸ್ಪಂದಿಸುವ ಮನೋಭಾವ ಇಲ್ಲ. ಇದು ಸರಿಯಲ್ಲ. ಸಮಾಜದ ನೋವು, ನಲಿವುಗಳಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಲ್ಲೂ ಸಾಮರ್ಥ್ಯ ಇದೆ. ಅವರಲ್ಲಿ ಆತ್ಮವಿಶ್ವಾಸ ತುಂಬಿ ಸಾಧನೆಗೆ ಉಪನ್ಯಾಸಕರು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.</p>.<p>ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ವಿವಿಧ ವಿಷಯಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ಕಾಲೇಜಿನ ಪ್ರಾಚಾರ್ಯ ಡಾ. ಗೋಪಾಲಕೃಷ್ಣ ನಾಯ್ಕ್ ಎಸ್.ಆರ್. ಅಧ್ಯಕ್ಷತೆ ವಹಿಸಿದ್ದರು. ಪದವಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಬಿ.ಎಸ್. ನಾಗರತ್ನಮ್ಮ, ಉಪನ್ಯಾಸಕರಾದ ಶೋಭಾ ಟಿ., ಕೊಟ್ರಪ್ಪ ಕೆ. ಇದ್ದರು.</p>.<p>ನಯನ ಸ್ವಾಗತಿಸಿದರು. ಅನುಷಾ ವಂದಿಸಿದರು. ಸಂಗೀತಾ, ಯಶಸ್ವಿನಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>