ಪುತ್ರ, ಪುತ್ರಿ ಓಡಾಡುತ್ತಿರುವುದನ್ನು ಸಮರ್ಥಿಸಿಕೊಂಡ ಸತೀಶ್ ಜಾರಕಿಹೊಳಿ
ಸಾಮ್ರಾಜ್ಯ ಉಳಿಸಲು ಮಕ್ಕಳು ರಾಜಕೀಯಕ್ಕೆ

ದಾವಣಗೆರೆ: ‘ಇಷ್ಟೆಲ್ಲ ಸಾಮ್ರಾಜ್ಯ ಕಟ್ಟಿದ್ದೇವೆ. ಅದನ್ನು ಮುಂದಕ್ಕೆ ಒಯ್ಯಲು ಮಕ್ಕಳು ಬೇಕೇಬೇಕಲ್ಲ. ಅವರು ರಾಜಕೀಯ ಬಂದೇ ಬರ್ತಾರೆ. ಈ ಬಗ್ಗೆ ಈಗಾಗಲೇ ನಾನು ಘೋಷಣೆ ಮಾಡಿದ್ದೇನೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಜಾರಕಿಹೊಳಿ ಅವರ ಪುತ್ರ ಮತ್ತು ಪುತ್ರಿ ಓಡಾಡಿಕೊಂಡಿರುವ ಬಗ್ಗೆ ಸುದ್ದಿಗಾರರು ಹರಿಹರದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
ಈಗಲೇ ಚುನಾವಣೆಗೆ ನಿಲ್ಲಲ್ಲ. ಅವರು ಇನ್ನಷ್ಟು ಕಲಿಯಲಿಕ್ಕಿದೆ. ಮುಂದೆ ಎಲ್ಲ ಕಲಿತುಕೊಂಡು ರಾಜಕೀಯಕ್ಕೆ ಬರುತ್ತಾರೆ ಎಂದು ಸಮರ್ಥಿಸಿಕೊಂಡರು.
ಮಗಳು ಪ್ರಿಯಾಂಕ ಸೋಮವಾರ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.