ಮಾಜಿ ಸಿಎಂ ಜೆ.ಎಚ್. ಪಟೇಲ್ ಅವರ ತಂಗಿಯ ಸೊಸೆ ಪರಂಜ್ಯೋತಿ ಅವರ ಅಂತ್ಯಕ್ರಿಯೆ ಚನ್ನಗಿರಿ ತಾಲ್ಲೂಕು ತ್ಯಾವಣಿಗೆಯಲ್ಲಿ ಶುಕ್ರವಾರ ರಾತ್ರಿ ನಡೆಯಿತು. ಮಾಜಿ ಶಾಸಕ ಟಿ. ಗುರುಸಿದ್ಧನಗೌಡ ಅವರ ಸೊಸೆ ಪ್ರೀತಿ ರವಿಕುಮಾರ್ ಅಂತ್ಯಕ್ರಿಯೆ ಹರಪನಹಳ್ಳಿ ತಾಲ್ಲೂಕು ಗಡಿಗುಡಾಳು ಗ್ರಾಮದಲ್ಲಿ, ಮಾನಸಿ, ಯಶ್ಮಿತಾ ಅವರ ಅಂತ್ಯಕ್ರಿಯೆ ನಗರದಲ್ಲಿ ಶನಿವಾರ ನೆರವೇರಿಸಲಾಯಿತು.