ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ಆಯೋಜಕರು ಕೋವಿಡ್ ನೆಗೆಟಿವ್ ವರದಿ ಮತ್ತು ಕನಿಷ್ಠ ಮೊದಲ ಡೋಸ್ ಲಸಿಕೆ ಪಡೆದಿರುವ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ. ಗಣೇಶಮೂರ್ತಿ ಪ್ರತಿಷ್ಠಾಪಿಸಲು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯುವುದೂ ಕಡ್ಡಾಯ. ನಗರ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯಾ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿ ಕಚೇರಿ, ಗ್ರಾಮ ಮಟ್ಟದಲ್ಲಿ ಆಯಾ ಗ್ರಾಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಪಿಡಿಒಗಳಿಂದ ಅನುಮತಿ ಪಡೆಯಬೇಕು. ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಹಾಗೂ ಇತರೆ ಇಲಾಖೆಗಳಿಂದ ಪಡೆಯಬೇಕಾದ ಅನುಮತಿ ಪತ್ರ ಒಂದೇ ಕಡೆ ನೀಡಲು ಪಾಲಿಕೆ ಸೇರಿ ಸ್ಥಳೀಯ ಸಂಸ್ಥೆಗಳ ಕಚೇರಿಯಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗುವುದು ಎಂದರು.