<p><strong>ಹೊನ್ನಾಳಿ:</strong> ಪಟ್ಟಣದಲ್ಲಿ ಒಂದು ತಿಂಗಳು ಕಳೆದರೂ ಕಸ ವಿಲೇವಾರಿಯಾಗಿಲ್ಲ. ಇದರಿಂದ ಎಲ್ಲೆಲ್ಲೂ ಕಸದ ರಾಶಿ ಬಿದ್ದಿದೆ. ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಎದುರು, ಅಗ್ನಿಶಾಮಕ ದಳದ ಎದುರಿನ ವಸತಿ ಗೃಹ, ಹಿರೇಕಲ್ಮಠಕ್ಕೆ ಹೋಗುವ ಬಲಭಾಗದ ರಸ್ತೆ , ಮರಳೋಣೆ ರಸ್ತೆ, ಸರ್ಕಾರಿ ಬಸ್ ನಿಲ್ದಾಣದ ಎಡಭಾಗ, ಎಸ್ಬಿಎಂ ಎದುರು.. ಹೀಗೆ ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಪೇಪರ್ ಸೇರಿದಂತೆ ಇತರೆ ತ್ಯಾಜ್ಯ ತುಂಬಿ ತುಳುಕುತ್ತಿದೆ. ಕಸದ ರಾಶಿ ಚರಂಡಿಗೆ ಬಿದ್ದು, ನೀರು ನಿಂತು ದುರ್ವಾಸನೆ ಹೆಚ್ಚಿದೆ. ಇದರಿಂದ ನಿವಾಸಿಗಳು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.</p>.<p>ಪುರಸಭೆಯಿಂದ ಪ್ಲಾಸ್ಟಿಕ್ ಮಾರಾಟ ಮಾಡುವ ಅಂಗಡಿಗಳ ಮೇಲೆ ಒಂದೆರಡು ಬಾರಿ ದಾಳಿ ಮಾಡಿದ್ದು ಬಿಟ್ಟರೆ ಮತ್ತೆ ದಾಳಿ ಮಾಡಿಲ್ಲ. ಪ್ಲಾಸ್ಟಿಕ್ ಮಾರದಂತೆ ಎಚ್ಚರಿಕೆ ಕೊಡುತ್ತಿದೆಯಾದರೂ ಅದು ಪರಿಣಾಮಕಾರಿಯಾಗಿಲ್ಲ. ಪ್ಲಾಸ್ಟಿಕ್ ತ್ಯಾಜ್ಯವೇ ಬೀದಿಗಳಲ್ಲಿ ರಾಶಿ ಬಿದ್ದಿದೆ.</p>.<p>ಇನ್ನೂ ಕಸ ವಿಲೇವಾರಿ ಮಾಡಬೇಕಾದ ಪುರಸಭೆಯ ವಾಹನಗಳು 8 ಕಿ.ಮೀ ದೂರದ ಮಾಸಡಿ ಘನತ್ಯಾಜ್ಯ ಸಂಗ್ರಹ ಘಟಕಕ್ಕೆ ಒಂದೆರಡು ಬಾರಿ ಹೋಗಿ ಹಾಕಿ ಬರುವಷ್ಟರಲ್ಲಿಯೇ ಆ ದಿನ ಮುಗಿದು ಹೋಗುತ್ತದೆ. ಹೀಗಾಗಿ ಕಸದ ರಾಶಿ ಹೆಚ್ಚಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ವಿನಯ್ ವಗ್ಗರ್ ದೂರಿದರು.</p>.<p>‘ಸರ್ಕಾರಿ ಬಸ್ ನಿಲ್ದಾಣದ ಕೊನೆಯ ತುದಿಯಲ್ಲಿ ಕಸವನ್ನು ಎಸೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕುತ್ತಿಲ್ಲ. ಅಧ್ಯಕ್ಷರು, ಮುಖ್ಯಾಧಿಕಾರಿಗಳನ್ನು ಈ ಬಗ್ಗೆ ಕೇಳಿದರೆ ಹೊಸದಾಗಿ ಟ್ರ್ಯಾಕ್ಟರ್ ಖರೀದಿಸಿದ್ದು ಬಂದ ತಕ್ಷಣವೇ ಕಸವನ್ನು ವಿಲೇವಾರಿ ಮಾಡುತ್ತೇವೆ ಎನ್ನುತ್ತಾರೆ. ಆದರೆ ತಿಂಗಳು ಕಳೆದರೂ ವಿಲೇವಾರಿಯಾಗಿಲ್ಲ’ ಎಂದು ಅವರು ಆರೋಪಿಸಿದರು.</p>.<p>‘ಪಟ್ಟಣದಲ್ಲಿ ಕಸವನ್ನು ಸಮರ್ಪಕವಾಗಿ ತೆರವುಗೊಳಿಸುತ್ತಿಲ್ಲ. ಕಸದ ರಾಶಿ ಬಳಿ ದನಗಳು, ಹಂದಿಗಳು, ಬೀದಿ ನಾಯಿಗಳ ಹಾವಳಿ ಹೆಚ್ಚಿದೆ. ತುಂಗಾ ಕಾಲುವೆ ಬದಿ ಕಸದ ರಾಶಿಯೇ ಇದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು‘ ಎಂದು ಸ್ಥಳೀಯರಾದ ಪ್ರೇಮಕುಮಾರ್ ಆಗ್ರಹಿಸಿದರು.</p>.<div><blockquote>ಎರಡು ಹೊಸ ಟ್ರ್ಯಾಕ್ಟರ್ಗಳನ್ನು ಖರೀದಿ ಮಾಡಿದ್ದು ಎರಡು ದಿನಗಳಲ್ಲಿ ಪಟ್ಟಣದಲ್ಲಿನ ತ್ಯಾಜ್ಯ ತೆರವುಗೊಳಿಸಲಾಗುವುದು. ಕಸ ಎಲ್ಲೆಂದರಲ್ಲಿ ಎಸೆಯದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗುವುದು </blockquote><span class="attribution">-ಮೈಲಪ್ಪ, ಅಧ್ಯಕ್ಷ ಪುರಸಭೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಪಟ್ಟಣದಲ್ಲಿ ಒಂದು ತಿಂಗಳು ಕಳೆದರೂ ಕಸ ವಿಲೇವಾರಿಯಾಗಿಲ್ಲ. ಇದರಿಂದ ಎಲ್ಲೆಲ್ಲೂ ಕಸದ ರಾಶಿ ಬಿದ್ದಿದೆ. ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಎದುರು, ಅಗ್ನಿಶಾಮಕ ದಳದ ಎದುರಿನ ವಸತಿ ಗೃಹ, ಹಿರೇಕಲ್ಮಠಕ್ಕೆ ಹೋಗುವ ಬಲಭಾಗದ ರಸ್ತೆ , ಮರಳೋಣೆ ರಸ್ತೆ, ಸರ್ಕಾರಿ ಬಸ್ ನಿಲ್ದಾಣದ ಎಡಭಾಗ, ಎಸ್ಬಿಎಂ ಎದುರು.. ಹೀಗೆ ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಪೇಪರ್ ಸೇರಿದಂತೆ ಇತರೆ ತ್ಯಾಜ್ಯ ತುಂಬಿ ತುಳುಕುತ್ತಿದೆ. ಕಸದ ರಾಶಿ ಚರಂಡಿಗೆ ಬಿದ್ದು, ನೀರು ನಿಂತು ದುರ್ವಾಸನೆ ಹೆಚ್ಚಿದೆ. ಇದರಿಂದ ನಿವಾಸಿಗಳು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.</p>.<p>ಪುರಸಭೆಯಿಂದ ಪ್ಲಾಸ್ಟಿಕ್ ಮಾರಾಟ ಮಾಡುವ ಅಂಗಡಿಗಳ ಮೇಲೆ ಒಂದೆರಡು ಬಾರಿ ದಾಳಿ ಮಾಡಿದ್ದು ಬಿಟ್ಟರೆ ಮತ್ತೆ ದಾಳಿ ಮಾಡಿಲ್ಲ. ಪ್ಲಾಸ್ಟಿಕ್ ಮಾರದಂತೆ ಎಚ್ಚರಿಕೆ ಕೊಡುತ್ತಿದೆಯಾದರೂ ಅದು ಪರಿಣಾಮಕಾರಿಯಾಗಿಲ್ಲ. ಪ್ಲಾಸ್ಟಿಕ್ ತ್ಯಾಜ್ಯವೇ ಬೀದಿಗಳಲ್ಲಿ ರಾಶಿ ಬಿದ್ದಿದೆ.</p>.<p>ಇನ್ನೂ ಕಸ ವಿಲೇವಾರಿ ಮಾಡಬೇಕಾದ ಪುರಸಭೆಯ ವಾಹನಗಳು 8 ಕಿ.ಮೀ ದೂರದ ಮಾಸಡಿ ಘನತ್ಯಾಜ್ಯ ಸಂಗ್ರಹ ಘಟಕಕ್ಕೆ ಒಂದೆರಡು ಬಾರಿ ಹೋಗಿ ಹಾಕಿ ಬರುವಷ್ಟರಲ್ಲಿಯೇ ಆ ದಿನ ಮುಗಿದು ಹೋಗುತ್ತದೆ. ಹೀಗಾಗಿ ಕಸದ ರಾಶಿ ಹೆಚ್ಚಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ವಿನಯ್ ವಗ್ಗರ್ ದೂರಿದರು.</p>.<p>‘ಸರ್ಕಾರಿ ಬಸ್ ನಿಲ್ದಾಣದ ಕೊನೆಯ ತುದಿಯಲ್ಲಿ ಕಸವನ್ನು ಎಸೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕುತ್ತಿಲ್ಲ. ಅಧ್ಯಕ್ಷರು, ಮುಖ್ಯಾಧಿಕಾರಿಗಳನ್ನು ಈ ಬಗ್ಗೆ ಕೇಳಿದರೆ ಹೊಸದಾಗಿ ಟ್ರ್ಯಾಕ್ಟರ್ ಖರೀದಿಸಿದ್ದು ಬಂದ ತಕ್ಷಣವೇ ಕಸವನ್ನು ವಿಲೇವಾರಿ ಮಾಡುತ್ತೇವೆ ಎನ್ನುತ್ತಾರೆ. ಆದರೆ ತಿಂಗಳು ಕಳೆದರೂ ವಿಲೇವಾರಿಯಾಗಿಲ್ಲ’ ಎಂದು ಅವರು ಆರೋಪಿಸಿದರು.</p>.<p>‘ಪಟ್ಟಣದಲ್ಲಿ ಕಸವನ್ನು ಸಮರ್ಪಕವಾಗಿ ತೆರವುಗೊಳಿಸುತ್ತಿಲ್ಲ. ಕಸದ ರಾಶಿ ಬಳಿ ದನಗಳು, ಹಂದಿಗಳು, ಬೀದಿ ನಾಯಿಗಳ ಹಾವಳಿ ಹೆಚ್ಚಿದೆ. ತುಂಗಾ ಕಾಲುವೆ ಬದಿ ಕಸದ ರಾಶಿಯೇ ಇದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು‘ ಎಂದು ಸ್ಥಳೀಯರಾದ ಪ್ರೇಮಕುಮಾರ್ ಆಗ್ರಹಿಸಿದರು.</p>.<div><blockquote>ಎರಡು ಹೊಸ ಟ್ರ್ಯಾಕ್ಟರ್ಗಳನ್ನು ಖರೀದಿ ಮಾಡಿದ್ದು ಎರಡು ದಿನಗಳಲ್ಲಿ ಪಟ್ಟಣದಲ್ಲಿನ ತ್ಯಾಜ್ಯ ತೆರವುಗೊಳಿಸಲಾಗುವುದು. ಕಸ ಎಲ್ಲೆಂದರಲ್ಲಿ ಎಸೆಯದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗುವುದು </blockquote><span class="attribution">-ಮೈಲಪ್ಪ, ಅಧ್ಯಕ್ಷ ಪುರಸಭೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>