<p><strong>ಕಡರನಾಯ್ಕನಹಳ್ಳಿ</strong>: ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಿರಂತರ ಮಳೆಯಿಂದಾಗಿ ಅಂದಾಜು 70 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳ್ಳುಳ್ಳಿ ಫಸಲು ಜಮೀನಿನಲ್ಲೇ ಕೊಳೆತಿದ್ದು, ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. </p><p>ಈ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು ಬೆಳ್ಳುಳ್ಳಿ ಹಾಗೂ ಈರುಳ್ಳಿಯನ್ನು ಹೆಚ್ಚಾಗಿ ಬೆಳೆಯುತ್ತಾರೆ. ಈ ಬಾರಿ ಬೆಳ್ಳುಳ್ಳಿ ಬೆಳೆಯ ಪ್ರದೇಶ ಅಧಿಕವಾಗಿತ್ತು. ಆದರೆ, ನಿರಂತರ ಮಳೆಯ ಪರಿಣಾಮ ಬೆಳೆ ನೀರಲ್ಲಿ ಹಾಳಾಗಿದ್ದು, ರೈತರು ಮಾಡಿದ್ದ ಖರ್ಚು ಹಾಗೂ ಶ್ರಮ ನೀರುಪಾಲಾಗಿದೆ.</p><p>‘ಎಕರೆಗೆ ಅಂದಾಜು ₹ 22,000 ಖರ್ಚು ಮಾಡಿದ್ದೆ. ಸರಿಯಾಗಿ ಫಸಲು ಕೈಗೆ ಸಿಕ್ಕಿದ್ದರೆ ಎಕರೆಗೆ ₹ 50,000ದಿಂದ ₹ 60,000 ಆದಾಯ ಸಿಗುವ ನಿರೀಕ್ಷೆಯಿತ್ತು. ಮಳೆಯಿಂದಾಗಿ ಬೆಳೆ ಸಂಪೂರ್ಣ ನಷ್ಟವಾಗಿದೆ. ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು’ ಎಂದು ಹೊಸಳ್ಳಿಯ ರೈತರಾದ ಅಶೋಕ ರೆಡ್ಡಿ, ಸಂಜೀವ ರೆಡ್ಡಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.</p><p>‘ಬೆಳೆ ಹಾನಿ ಸಮೀಕ್ಷೆ ಮಾಡಲಾಗಿದೆ. ಸೂಕ್ತ ಪರಿಹಾರಕ್ಕಾಗಿ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು’ ಎಂದು ಮಲೇಬೆನ್ನೂರು ಸಹಾಯಕ ತೋಟಗಾರಿಕಾ ಅಧಿಕಾರಿ ಜಿ.ಆರ್. ಸಂತೋಷ್ ಮತ್ತು ಗ್ರಾಮಾಡಳಿತಾಧಿಕಾರಿ ಸೌಮ್ಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ</strong>: ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಿರಂತರ ಮಳೆಯಿಂದಾಗಿ ಅಂದಾಜು 70 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳ್ಳುಳ್ಳಿ ಫಸಲು ಜಮೀನಿನಲ್ಲೇ ಕೊಳೆತಿದ್ದು, ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. </p><p>ಈ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು ಬೆಳ್ಳುಳ್ಳಿ ಹಾಗೂ ಈರುಳ್ಳಿಯನ್ನು ಹೆಚ್ಚಾಗಿ ಬೆಳೆಯುತ್ತಾರೆ. ಈ ಬಾರಿ ಬೆಳ್ಳುಳ್ಳಿ ಬೆಳೆಯ ಪ್ರದೇಶ ಅಧಿಕವಾಗಿತ್ತು. ಆದರೆ, ನಿರಂತರ ಮಳೆಯ ಪರಿಣಾಮ ಬೆಳೆ ನೀರಲ್ಲಿ ಹಾಳಾಗಿದ್ದು, ರೈತರು ಮಾಡಿದ್ದ ಖರ್ಚು ಹಾಗೂ ಶ್ರಮ ನೀರುಪಾಲಾಗಿದೆ.</p><p>‘ಎಕರೆಗೆ ಅಂದಾಜು ₹ 22,000 ಖರ್ಚು ಮಾಡಿದ್ದೆ. ಸರಿಯಾಗಿ ಫಸಲು ಕೈಗೆ ಸಿಕ್ಕಿದ್ದರೆ ಎಕರೆಗೆ ₹ 50,000ದಿಂದ ₹ 60,000 ಆದಾಯ ಸಿಗುವ ನಿರೀಕ್ಷೆಯಿತ್ತು. ಮಳೆಯಿಂದಾಗಿ ಬೆಳೆ ಸಂಪೂರ್ಣ ನಷ್ಟವಾಗಿದೆ. ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು’ ಎಂದು ಹೊಸಳ್ಳಿಯ ರೈತರಾದ ಅಶೋಕ ರೆಡ್ಡಿ, ಸಂಜೀವ ರೆಡ್ಡಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.</p><p>‘ಬೆಳೆ ಹಾನಿ ಸಮೀಕ್ಷೆ ಮಾಡಲಾಗಿದೆ. ಸೂಕ್ತ ಪರಿಹಾರಕ್ಕಾಗಿ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು’ ಎಂದು ಮಲೇಬೆನ್ನೂರು ಸಹಾಯಕ ತೋಟಗಾರಿಕಾ ಅಧಿಕಾರಿ ಜಿ.ಆರ್. ಸಂತೋಷ್ ಮತ್ತು ಗ್ರಾಮಾಡಳಿತಾಧಿಕಾರಿ ಸೌಮ್ಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>